Connect with us

Dvgsuddi Kannada | online news portal | Kannada news online

ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯಿಂದ ಪ್ರತಿಭಟನೆ

ಪ್ರಮುಖ ಸುದ್ದಿ

ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯಿಂದ ಪ್ರತಿಭಟನೆ

ಬೆಂಗಳೂರು: ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಶೇ.30ರಷ್ಟು ಶುಲ್ಕ ಕಡಿತದಿಂದ  ಖಾಸಗಿ ಶಾಲೆಗಳವರಿಗೆ ತೀವ್ರ ಸಂಕಷ್ಟ  ತೆದುರಾಗಿದೆ  ಎಂದು ಆರೋಪಿಸಿ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋಧಕ-ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ವತಿಯಿಂದ ಮೆಜಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ  ಬೃಹತ್ ರ್ಯಾಲಿ ನಡೆಸಿದರು.

ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ರಾಯಚೂರು, ಗುಲ್ಬರ್ಗಾ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಶಿಕ್ಷಕರು ಶುಲ್ಕ ಕಡಿತವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಪುಟ್ಟಣ್ಣ, ಸಂಘಟನೆ ಸಂಚಾಲಕ ಡಿ.ಶಶಿಕುಮಾರ್ ಮುಂತಾದವರು ಸರ್ಕಾರದ ಕ್ರಮವನ್ನು ಖಂಡಿಸಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದೇ ದುಸ್ತರವಾಗಿದೆ. ಕೋವಿಡ್-19 ಪರಿಸ್ಥಿತಿಯಲ್ಲಿ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಇಲ್ಲಿನ ಸಿಬ್ಬಂದಿಗೆ ಯಾವುದೇ ನೆರವು ನೀಡಲಿಲ್ಲ.

ಸಾಲ ಮಾಡಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಸಂದರ್ಭದಲ್ಲಿ ಸಾಲದ ಕಂತು ಕಟ್ಟಲು ಸಮಯಾವಕಾಶ ಕೂಡ ನೀಡಿಲ್ಲ. ವಿದ್ಯುತ್ ಬಿಲ್ ಪಾವತಿ ಮತ್ತಿತರ ಯಾವುದೇ ರಿಯಾಯಿತಿಗಳನ್ನು ಕೂಡ ಸರ್ಕಾರ ನೀಡಿಲ್ಲ. ಈಗ ಏಕಾಏಕಿ ಶೇ.30ರಷ್ಟು ಶುಲ್ಕ ಕಡಿತಗೊಳಿಸಿದರೆ ನಾವು ಸಿಬ್ಬಂದಿಗೆ ಸಂಬಳ ಕೊಡುವುದು ಹೇಗೆ ಎಂದು ಪ್ರಶ್ನಿಸಿದರು.

ಶಿಕ್ಷಣ ಸಂಸ್ಥೆಗಳ ಆರ್ಥಿಕ ಸಂಕಷ್ಟ, ಅವೈಜ್ಞಾನಿಕ ಶುಲ್ಕ ಕಡಿತ, ಕೋವಿಡ್-19 ಸಂಕಷ್ಟದಲ್ಲೂ ಹಳೆಯ ಶಾಲೆಗಳಿಗೆ ಹೊಸ ಶಾಲೆಗಳ ಷರತ್ತು ವಿಧಿಸಿ ಮಾನ್ಯತೆ ನವೀಕರಣದ ಹೆಸರಿನಲ್ಲಿ ಭ್ರಷ್ಟಾಚಾರ, ಶಾಲೆಗಳಿಗೆ ಕಡ್ಡಾಯ ದಾಖಲಾತಿ, ಹಾಜರಾತಿ, ಕನಿಷ್ಟ ಮೌಲ್ಯಮಾಪನಕ್ಕೆ ಒತ್ತು ನೀಡದೆ ಇರುವುದು, ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸಂಸ್ಥೆಗಳಿಗೆ 371(ಜೆ) ಅಡಿಯಲ್ಲಿ ಬೇಡಿಕೆಗಳ ಈಡೇರಿಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});