ರಾಣೆಬೆನ್ನೂರು: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಐತಿಹಾಸಿಕ ಶ್ರೀ ಕ್ಷೇತ್ರ ದೇವರಗುಡ್ಡದಲ್ಲಿ ದಸರಾ ಹಬ್ಬದಲ್ಲಿ ನಡೆಯುವ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ದೈವವಾಣಿ ನುಡಿದಿದ್ದು, “ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್” ಎಂದು ಕಾರ್ಣಿಕವಾಗಿದೆ.
ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವಕ್ಕೆ ಸೇರಿದ್ದ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ದೈವವಾಣಿ ನುಡಿದ್ದಾರೆ. ವಿಜಯ ದಶಮಿಯ ಆಯುಧ ಪೂಜಾ ದಿನದಂದು ಐತಿಹಾಸಿಕ ಸುಕ್ಷೇತ್ರ ದೇವರಗುಡ್ಡದಲ್ಲಿಗೊರವಪ್ಪರು ಕಾರ್ಣೀಕ ನುಡಿದಿದ್ದಾರೆ. ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್ ಎಂದು ದೇವರಗುಡ್ಡದಲ್ಲಿ ಬಿಲ್ಲನ್ನೇರಿ ಗೊರವಪ್ಪ ಕಾರ್ಣೀಕ ನುಡಿದಿದ್ದಾರೆ.
ದಸರಾ ಹಬ್ಬದ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕೋತ್ಸವ ಬಹಳ ಪ್ರಸಿದ್ಧಿ ಪಡೆದಿದೆ. ವರ್ಷದ ಭವಿಷ್ಯ ವಾಣಿ ಅಂತಲೇ ಜನ ಕಾರ್ಷಿಕೋತ್ಸವವನ್ನು ನಂಬುತ್ತಾರೆ. ಈ ಬಗ್ಗೆ ವಿಶ್ಲೇಷಣೆ ಮಾಡಲಾಗುತ್ತಿದ್ದು, ಕಾರ್ಣಿಕ ದೈವವಾಣಿಯನ್ನು ರಾಜಕೀಯ, ಕೃಷಿ ಹಾಗೂ ಆರ್ಥಿಕ ಬೆಳವಣಿಗೆಗೆ ಸಂಬಂಧಪಟ್ಟಂತೆ ಒಂದು ವರ್ಷದ ಭವಿಷ್ಯವೆಂದೇ ಹೇಳಲಾಗುತ್ತದೆ.
ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್” ಅರ್ಥ ಏನು..?: ಈ ವರ್ಷ ಮುಕ್ಕೋಟಿ ಜನ ಅನ್ನದಾತರು ಸಾವಿರಾರು ರೂಪಾಯಿ ಖರ್ಚು ಮಾಡಿದರೂ ಬೆಳೆಗಳು ಬರಲಿಲ್ಲ. ಮಳೆರಾಯನ ಅವಕೃಪೆಯಿಂದ ಬರಗಾಲ ಬಂದಿದೆ. ಮಳೆ ಇಲ್ಲದೆ ಅನ್ನದಾತರು ಕೈ ಸುಟ್ಟುಕೊಂಡಿದ್ದಾರೆ. ಮುಕ್ಕೋಟಿ ಚಲ್ಲಿತಲೇ ಅಂದರೆ ರೈತ ವರ್ಗದವರು ಕೋಟ್ಯಂತರ ರೂಪಾಯಿ ಭೂಮಿಗೆ ಹಾಕ್ತಾರೆ, ಅದರಿಂದ ರೈತರಿಗೆ ಲಾಭವಾಗುವ ನಿರೀಕ್ಷೆಗಳು ಕಡಿಮೆ ಎಂದು ದೇವರಗುಡ್ಡದ ಪ್ರಧಾನ ಅರ್ಚಕರು ವಿಶ್ಲೇಷಣೆ ಮಾಡಿದ್ದಾರೆ



