Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಡಿವಿಜಿ ಸುದ್ದಿ, ಬೆಂಗಳೂರು: ಈಶಾನ್ಯ ಹಿಂಗಾರು ಚುರುಕಾಗಿದೆ. ಜತೆಗೆ  ಬಂಗಾಳ ಕೊಲ್ಲಿಯಲ್ಲಿ ಮೈಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ  ಮಾಹಿತಿ ನೀಡಿದ್ದಾರೆ.

ಈಶಾನ್ಯ ಕಡೆಯಿಂದ ಆರಂಭವಾಗಿರುವ ಮಾರುತಗಳು ಹೆಚ್ಚು ತೇವಾಂಶದಿಂದ ಕೂಡಿರುವುದರಿಂದ ತಂಪಾದ ವಾತಾವರಣ ಕಂಡು ಬರುತ್ತಿದೆ. ಇದರಿಂದ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೆ, ದೀಪಾವಳಿಯ ನಂತರ ಮತ್ತೊಂದು ಸುತ್ತಿನ ಮಳೆ ಬರುವ ಮುನ್ಸೂಚನೆಗಳಿವೆ. ನ.17, 18ರಂದು ಮತ್ತೆರಡು ದಿನ ಮಳೆ ಬರುವ ಲಕ್ಷಣಗಳಿವೆ.

ನಾಳೆಯವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಹೆಚ್ಚಿನ  ಮಳೆಯಾಗಬಹುದು. ಈಗಾಲೇ ಬೆಳೆ ಕೊಯ್ಲ ಆರಂಭಿಸಿದ್ದು, ಮಳೆ ಬಂದರೆ ಫಸಲಿಗೆ ಹಾನಿಯಾಗಲಿದೆ ಎಂಬ ಆತಂಕದಲ್ಲಿ ರೈತರಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});