Connect with us

Dvgsuddi Kannada | online news portal | Kannada news online

ಭೀಕರ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ  ಸಾವು; ಇನ್ನಿಬ್ಬರು ಗಂಭೀರ ಗಾಯ

ಪ್ರಮುಖ ಸುದ್ದಿ

ಭೀಕರ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ  ಸಾವು; ಇನ್ನಿಬ್ಬರು ಗಂಭೀರ ಗಾಯ

ರಾಯಚೂರು: ಮೂರು ಲಾರಿ ಮತ್ತು ಕಾರಿನ ನಡುವೆ ಭೀಕರ  ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಇಬ್ಬರು  ಸಾವಿಗೀಡಾಗಿರುವ ಘಟನೆ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದಿದೆ.

ಜೇವರ್ಗ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನ‌ ದೇವದುರ್ಗ ಮೂಲದ ಹರ್ಷಿತಾ (18) ಹಾಗೂ ಭುವನ (16) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಲಾರಿ ಹಿಂಬದಿಯಲ್ಲಿ ಬರುತ್ತಿದ್ದ ಕಾರಿಗೆ ಅದರ ಹಿಂದೆ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಇದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿ ಹೊಡೆದಕ್ಕೆ  ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top