Connect with us

Dvgsuddi Kannada | online news portal | Kannada news online

ದಾವಣಗೆರೆ: ಹಳೇಬಾತಿ ಗ್ರಾಮದಲ್ಲಿ ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ

ದಾವಣಗೆರೆ

ದಾವಣಗೆರೆ: ಹಳೇಬಾತಿ ಗ್ರಾಮದಲ್ಲಿ ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ

ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ  ‘ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ದಾವಣಗೆರೆ ತಾಲ್ಲೂಕಿನ ಹಳೇ ಬಾತಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.  ರೈತರಿಗೆ ಮನೆಗೆ ಬಾಗಿಲಿಗೆ ತೆರಳಿ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಕಾರ್ಯಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್. ಎ ರವೀಂದ್ರನಾಥ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ, ತಹಶಿಲ್ದಾರ್ ಬಸನಗೌಡ , ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಭಾಗಿಯಾಗಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹಾತ್ವಕಾಂಕ್ಷೆ ಯೋಜನೆ ಇದಾಗಿದ್ದು, ಕಂದಾಯ ಸಚಿವ ಆರ್. ಅಶೋಕ್ ಅವರ ಕನಸಾಗಿದೆ. ಕಂದಾಯ ದಾಖಲೆಗಳನ್ನು ಸಂಬಂಧಿಸಿದ ಎಲ್ಲ ರ ಮನೆಗಳಿಗೆ ತಲುಪಿಸುವುದು ಯೋಜನೆಯ ಉದ್ದೇಶ ಹೊಂದಲಾಗಿದೆ.

ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುವ ಮೂಲ ದಾಖಲೆಗಳಾದ ಪಹಣಿ, ಆದಾಯ/ಜಾತಿ ಪ್ರಮಾಣ ಪತ್ರ ಮತ್ತು ಅಟ್ಲಾಸ್‍ಗಳನ್ನು ರೈತರ ಮನೆ ಬಾಗಿಲೆಗೆ ಉಚಿತವಾಗಿ ತಲುಪಿಸಲಾಗುವುದು. ಈ ಯೋಜನೆಯಡಿ ಜಿಲ್ಲೆಯ 1.35 ಲಕ್ಷ ರೈತ ಕುಟುಂಬಗಳನ್ನು ಗುರುತಿಸಲಾಗಿದೆ. ಈ ರೈತ ಕುಟುಂಬಗಳಿಗೆ ಅವರಿಗೆ ಕಂದಾಯ ದಾಖಲೆಗಳನ್ನು ನೀಡಲಾಗುವುದು. ಒಟ್ಟಾರೆ 2.93 ಲಕ್ಷ ಪಹಣಿ, 3.23 ಲಕ್ಷ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, 93 ಸಾವಿರ ಅಟ್ಲಾಸ್ ಸೇರಿದಂತೆ 7.10 ಲಕ್ಷ ದಾಖಲೆಗಳನ್ನು ವಿತರಿಸಲಾಗುತ್ತಿದೆ.

ಇಂದು ಪತ್ರಗಳನ್ನು ಪಡೆಯಲು ಸಾಧ್ಯವಾಗದಿದ್ದವರು, ಮಾ.21ರಿಂದ 26ರ ನಡುವಿನ ವಾರದಲ್ಲಿ ನಾಡಕಚೇರಿಯಲ್ಲಿ ಉಚಿತವಾಗಿ ಪತ್ರಗಳನ್ನು ಪಡೆಯಬಹುದು. ತಹಶೀಲ್ದಾರರು, ಉಪ ತಹಶೀಲ್ದಾರರು, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಸಹಾಯಕ ಸಿಬ್ಬಂದಿಗಳ ಮೂಲಕ ದಾಖಲೆಗಳನ್ನು ವಿತರಿಸಲಾಗುವುದು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top