Connect with us

Dvgsuddi Kannada | online news portal | Kannada news online

ಬಿಜೆಪಿ ಹೈಕಮಾಂಡ್ ತಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ: ಮುನಿರತ್ನ

ಪ್ರಮುಖ ಸುದ್ದಿ

ಬಿಜೆಪಿ ಹೈಕಮಾಂಡ್ ತಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ: ಮುನಿರತ್ನ

ಡಿವಿಜಿ ಸುದ್ದಿ, ಬೆಂಗಳೂರು:  ಚುನಾವಣೆಯಲ್ಲಿ ಒಬ್ಬರ ಮೇಲೆ ಒಬ್ಬರು ಮಾತನಾಡೋದು ಸಹಜ. ಚುನಾವಣಾ ಮತ್ತು ರಾಜಕೀಯದಲ್ಲಿ ವೈಯಕ್ತಿಯ ದ್ವೇಷ ಇರಲ್ಲ. ಉಪ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ  ಬಿಜೆಪಿ  ಹೈ ಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮುನಿರತ್ನ ಹೇಳಿದರು.

ರಾಜಾರಾಜೇಶ್ವರಿ ನಗರ ಉಪ ಚುನಾವಣೆ ನಿಗದಿತ ದಿನಾಂಕವೇ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ನಂತರ ಮಾತನಾಡಿದ ಅವರು,  ಈ ಪ್ರಕರಣ ನ್ಯಾಯಾಲಯದಲ್ಲಿದ್ದರಿಂದ ಇದರ ಬಗ್ಗೆ ನಾನು ಮಾತನಾಡಿರಲಿಲ್ಲ. ಇಂದು ಸುಪ್ರೀಂಕೋರ್ಟ್ ನ್ಯಾಯದ ಪರವಾಗಿ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ತೆಗೆದುಕೊಂಡ ಎಲ್ಲ ಮತಗಳು ಅಸಲಿ ಎಂದು ಹೇಳಿದೆ. ಮಾಧ್ಯಮ, ಸಾರ್ವಜನಿಕರು ಮತಗಳು ನಕಲಿ ಎಂದು ಪ್ರಶ್ನಿಸಿದಾದ ನೋವು ಆಗುತ್ತಿತ್ತು. ನಕಲಿ ಅಂದಾಗ ಅನುಭವಿಸಿದ ನೋವು ನನಗೆ ಗೊತ್ತು ಎಂದು ಬಿಜೆಪಿ ಮುಖಂಡ ಮುನಿರತ್ನ ಹೇಳಿದರು.

ಚುನಾವಣಾ ಆಯೋಗದಿಂದ ಹಿಡಿದು ಎಲ್ಲ ತನಿಖೆಗಳು ನಕಲಿ ಮತಗಳು ಚಲಾವಣೆಯಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ. ಮುನಿರತ್ನಗೆ ಬಂದಿರುವ ಎಲ್ಲ ಮತಗಳು ಅಸಲಿ ಎಂಬುವುದು ಇಂದು ಸಾಬೀತಾಗಿದೆ. ನನ್ನ ವಿರುದ್ಧ ಅರ್ಜಿ ಸಲ್ಲಿಸಿದ್ದ ತುಳಸಿ ಮುನಿರಾಜು ಗೌಡ ಸಹ ಬಿಜೆಪಿಯಲ್ಲಿಯೇ ಇದ್ದಾರೆ. ಮುಂದೆ ಪಕ್ಷದಲ್ಲಿ ಜೊತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತೇವೆ. ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯದಾಗಲಿ ಎಂದರು.

ಆರ್.ಆರ್.ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕುಸುಮಾ ಹನುಂತರಾಯಪ್ಪ ಸ್ಪರ್ಧೆ ಮಾಡಿದ್ದಾರೆ. ಮೊದಲ ಬಾರಿಗೆ ಚುನಾವಣೆ ಅಖಾಡಕ್ಕೆ ಆಗಮಿಸಿದ್ದಾರೆ. ಹಾಗಾಗಿ ಅವರ ಬಗ್ಗೆ ಹೆಚ್ಚೇನು ಮಾತನಾಡಲ್ಲ. ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಎಲ್ಲರಿಗೂ ಅವಕಾಶವಿದೆ ಎಂದು ಹೇಳಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top