Connect with us

Dvgsuddi Kannada | online news portal | Kannada news online

ಆರೋಪಗಳಿಗೆ ಫಲಿತಾಂಶ ದಿನ ಉತ್ತರ ಕೊಡುತ್ತೇನೆ: ಮುನಿರತ್ನ

ಪ್ರಮುಖ ಸುದ್ದಿ

ಆರೋಪಗಳಿಗೆ ಫಲಿತಾಂಶ ದಿನ ಉತ್ತರ ಕೊಡುತ್ತೇನೆ: ಮುನಿರತ್ನ

ಡಿವಿಜಿ ಸುದ್ದಿ, ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ವಿರೋಧಿಗಳ ಆರೋಪಗಳಿಗೆ ಫಲಿತಾಂಶದ ದಿನ ಉತ್ತರ ಕೊಡುತ್ತೇನೆ. ಆರೋಪ ಮಾಡಿದವರು ತಿರುಪತಿಗೆ ಅಲ್ಲ, ಈ ಭೂಲೋಕದ ಯಾವುದೇ ದೇವಸ್ಥಾನಕ್ಕೆ ಕರೆದರೂ ನಾನು ಬರಲು ಸಿದ್ಧನಾಗಿದ್ದೇನೆ. ಅವರು ಸಿದ್ಧರಾಗಿ ಇರಲಿ. ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡುವುದು ದೊಡ್ಡ ವಿಚಾರವಿಲ್ಲ ಎಂದು ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದರು.

  ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಮತದಾರರ ಬಳಿ ಮತ ಭಿಕ್ಷೆ ಕೇಳಿದ್ದೀನಿ. ಆ ಭಿಕ್ಷೆ ಕೊಡುತ್ತಾರೆ ಎಂದು ನಂಬಿದ್ದೀನಿ. ಕೊರೊನಾದಂತಹ ಸಂದರ್ಭದಲ್ಲಿ ಮತದಾನ ಮಾಡುವುದು ವಿಶೇಷವಾಗಿದೆ. 18 ವರ್ಷದ ಯುವಕ ತನ್ನ ಮೊದಲ ಮತದಾನದಲ್ಲಿ ಭಾಗಿಯಾಗುತ್ತಿದ್ದರೆ, ಇವತ್ತಿನ ಮತದಾನ ಇತಿಹಾಸದಲ್ಲಿ ಉಳಿಯುತ್ತದೆ. ಏಕೆಂದರೆ ಕೊರೊನಾ ಕಾರಣದಿಂದ ಚುನಾವಣಾ ಆಯೋಗ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

ಕ್ಷೇತ್ರದ ಮತದಾರರು ಬುದ್ಧಿವಂತರು. ಪ್ರತಿಯೊಬ್ಬರು ಖಂಡಿತ ಬಂದು ಮತ ಚಲಾಯಿಸುತ್ತಾರೆ. ಯಾರಿಗಾದರೂ ಮತ ಹಾಕಿ ಆದರೆ ಎಲ್ಲರೂ ಮತದಾನ ಮಾಡಿ. ನಾನು ಮಲ್ಲೇಶ್ವರಂ ನಿವಾಸಿಯಾಗಿದ್ದು, ನನಗೆ ಆರ್.ಆರ್ ನಗರದಲ್ಲಿ ಮತದಾನದ ಅವಕಾಶವಿಲ್ಲ. ಆದ್ದರಿಂದ ಮನೆಯಲ್ಲಿ ಇರುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದು, ಜನರ ತೀರ್ಪು ಅಂತಿಮವಾಗಿದೆ.

ರಾಜಕಾರಣಿಗೂ ಭಿಕ್ಷೆ ಬೇಡುವವನಿಗೂ ಯಾವುದೇ ವ್ಯತ್ಯಾಸವಿಲ್ಲ. ಭಿಕ್ಷೆ ಬೇಡುವವರು ಅಮ್ಮ ಊಟ ಎನ್ನುತ್ತಾನೆ, ನಾವು ಅಮ್ಮ ಮತ ನೀಡಿ ಎನ್ನುತ್ತೇವೆ. ನನ್ನ ಮೇಲಿನ ಆರೋಪಗಳಿಗೆ ನಾನು ಉತ್ತರ ಕೊಡಲು ಸಿದ್ಧವಾಗಿದ್ದು, ಚುನಾವಣಾ ಆಯೋಗ ಅನುಮತಿ ಪಡೆದು ಪ್ರತಿಕಾಗೋಷ್ಠಿ ನಡೆಸುತ್ತೇನೆ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});