ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರನ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಅವರನ್ನು ಚಿತ್ರದುರ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯಲ್ಲಿ ಫೆ.28ರ ರಾತ್ರಿ ನಡೆದ ಗಲಾಟೆ ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಚಿತ್ರದುರ್ಗದಲ್ಲಿ ಬಂಧಿಸಿದ್ದಾರೆ.

ಫೆ.28ರ ರಾತ್ರಿ ಭದ್ರಾವತಿಯಲ್ಲಿ ನಡೆದ ಪ್ರೊ ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ರನ್ನರ್​ ಅಪ್​ ಆಗಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ತಂಡ ಜೈ ಶ್ರೀರಾಮ್ ಎಂದು ಘೋಷಣೆ ಹಾಕಿದ್ದರು. ಇದರಿಂದ ಸಿಟ್ಟಾಗಿದ್ದ ಶಾಸಕ ಸಂಗಮೇಶ್ವರ್ ಪುತ್ರ, ಸಹೋದರನ ಪುತ್ರರಿಂದ ತಂಡದ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಶಾಸಕ ಸಂಗಮೇಶ್ವರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಘಟನೆ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಕೊಲೆ ಬೆದರಿಕೆ, ಜಾತಿ ನಿಂದನೆ ಕೇಸ್​ನಲ್ಲಿ ಬಸವೇಶ್ A-4 ಆರೋಪಿಯಾಗಿದ್ದು, ಈ ಪ್ರಕರಣ ಸಂಬಂಧ ಈತನಕ ಸುಮಾರು 15 ಮಂದಿಯನ್ನು ಬಂಧಿಸಲಾಗಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಸವೇಶ್ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *