Connect with us

Dvgsuddi Kannada | online news portal | Kannada news online

ಎರಡನೇ ಟೆಸ್ಟ್: ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಪ್ರಮುಖ ಸುದ್ದಿ

ಎರಡನೇ ಟೆಸ್ಟ್: ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಮೇಲ್ಬರ್ನ್:  ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ಈ ಗೆಲುವಿನೊಂದಿಗೆ ಕಳೆದ ಪಂದ್ಯದಲ್ಲಿ ಹೀನಾಯವಾಗಿ ಸೋಲಿಸಿದ ಆಸ್ಟ್ರೇಲಿಯಾಗೆ ತಿರುಗೇಟು ನೀಡಿದೆ.

ನಾಲ್ಕನೇ ದಿನದಾಟದ ಅಂತಿಮ ಇನ್ನಿಂಗ್ಸ್ ನಲ್ಲಿ 70 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತಕ್ಕೆ ಆರಂಭದಲ್ಲೇ ಮಯಾಂಕ್ ಅಗರ್ ವಾಲ್ (5) ಮತ್ತು ಚೇತೇಶ್ವರ ಪೂಜಾರ (3) ರನ್ ಗಳಿಗೆ ವಿಕೆಟ್ ಕಳೆದು ಕೊಳ್ಳುವ ಮೂಲಕ  ಆರಂಭಿಕ ಆಘಾತ ಎದುರಾಗಿತ್ತು. ಆದರೆ, ಯುವ ಬ್ಯಾಟ್ಸ್ ಮನ್ ಶುಭ್ಮನ್ ಗಿಲ್ 35 ಮತ್ತು ನಾಯಕ ಅಜಿಂಕ್ಯ ರಹಾನೆ 27 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. 15.5 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ ಭಾರತ ಗೆಲುವು ದಾಖಲಿಸಿತು.

ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡವನ್ನು 200 ರನ್ ಗಳಿಗೆ ಕಟ್ಟಿಹಾಕುವಲ್ಲಿ ಭಾರತ ಯಶಸ್ವಿಯಾಗಿತ್ತು. ಆರನೇ ಕ್ರಮಾಂಕದಲ್ಲಿ ಆಡಿದ ಕ್ಯಾಮರೂನ್ ಗ್ರೀನ್ 45 ರನ್ ಗಳಿಸಿ ಆಸ್ಟ್ರೇಲಿಯಾ ಪರ ಹೆಚ್ಚಿನ ರನ್ ಪಡೆದರೆ, ಮ್ಯಾಥ್ಯೂ ವಾಡೆ 40ರನ್ ಗಳಿಸಿದರು. ಗ್ರೀನ್ ಮತ್ತು ಪ್ಯಾಟ್ ಪ್ಯಾಟ್ ಕಮ್ಮಿನ್ಸ್ ಏಳನೇ ವಿಕೆಟ್ ಜೊತೆಯಾಟದಲ್ಲಿ 57 ರನ್ ಗಳಿಸಿದರು. ಹೊಸ ಬಾಲ್ ತೆಗೆದುಕೊಂಡ ನಂತರ ಈ ಜೋಡಿ ಬೇರ್ಪಟ್ಟಿತು.

ಭಾರತ ಪರ ವೇಗಿ ಮೊಹಮ್ಮದ್ ಸಿರಾಜ್ 37 ರನ್ ಗಳಿಗೆ ಮೂರು ವಿಕೆಟ್ ಪಡೆದರೆ, ಜಸ್ಪ್ರೀತ್ ಬೂಮ್ರಾ 54ಕ್ಕೆ ಎರಡು, ರವೀಂದ್ರ ಜಡೇಜಾ 28ಕ್ಕೆ ಎರಡು ಮತ್ತು ಆರ್ ಅಶ್ವಿನ್ 71ಕ್ಕೆ 2 ವಿಕೆಟ್ ಕಬಳಿಸಿದರು.

ಮೆಲ್ಬರ್ನ್ ಅಂಗಳದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

  • ಸಂಕ್ಷಿಪ್ತ ಸ್ಕೋರ್
    ಆಸ್ಟ್ರೇಲಿಯಾಮೊದಲ ಇನಿಂಗ್ಸ್ 195
    ಭಾರತಮೊದಲ ಇನಿಂಗ್ಸ್ 325
    ಆಸ್ಟ್ರೇಲಿಯಾದ್ವಿತೀಯ ಇನಿಂಗ್ಸ್ 103.1 ಓವರ್ ಗಳಲ್ಲಿ 200 (ಮ್ಯಾಥ್ಯೂ ವೇಡ್ 40, ಲಾಬುಶೇನ್ 28, ಕ್ಯಾಮೆರನ್ ಗ್ರೀನ್ 45; ಮೊಹಮ್ಮದ್ ಸಿರಾಜ್ 37ಕ್ಕೆ 3, ರವೀಂದ್ರ ಜಡೇಜಾ 28ಕ್ಕೆ 3, ಬುಮ್ರಾ 54ಕ್ಕೆ 2, ಅಶ್ವಿನ್ 71ಕ್ಕೆ 2).
    ಭಾರತದ್ವಿತೀಯ ಇನಿಂಗ್ಸ್ 15.5 ಓವರ್ ಗಳಲ್ಲಿ 2 ವಿಕೆಟ್ ಗೆ 70 (ಶುಬ್ಮನ್ ಗಿಲ್ ಅಜೇಯ 35, ರಹಾನೆ ಅಜೇಯ 27)

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top