ದತ್ತ ಪೀಠವನ್ನು ಹಿಂದುಗಳಿಗೆ ಒಪ್ಪಿಸುವ ಆದೇಶ ಹೊರಡಿಸಲಿ:ಗಂಗಾಧರ ಕುಲಕರ್ಣಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ದಾವಣಗೆರೆ: ಸಿಎಂ ಸ್ಥಾನ  ಭದ್ರಗೊಳಸಿಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರು ಈ ಬಾರಿ ದತ್ತಮಾಲೆ ಧರಿಸಿ ದತ್ತಪೀಠಕ್ಕೆ ಆಗಮಿಸಬೇಕು.  ಈ ವೇಳೆ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸುವ ಸರಕಾರದ ಆದೇಶ ಹೊತ್ತು ತರಬೇಕು ಎಂದು ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ದತ್ತಪೀಠ  ಆರಂಭಿಕ ಹೋರಾಟದಲ್ಲಿ ಬಿ.ಎಸ್. ಯಡಿಯೂರಪ್ಪ ಅವರೂ ಭಾಗಿಯಾಗಿದ್ದರು. ಆಗ ಮುಖ್ಯಮಂತ್ರಿಯಾದರೆ ದತ್ತಪೀಠಕ್ಕೆ ಮಾಲೆ ಹಾಕಿಕೊಂಡು ಬರುವುದಾಗಿ ಹೇಳಿದ್ದರು. ಆದರೆ, ಅವರು ಮೂರು ಬಾರಿ ಮುಖ್ಯಮಂತ್ರಿಯಾದರೂ ಈ ಪ್ರಮಾಣ ಪಾಲನೆ ಮಾಡಿಲ್ಲ. ಈ ಕಾರಣದಿಂದಾಗಿಯೇ ಅವರು ಒಮ್ಮೆಯೂ ಪೂರ್ಣಾವಧಿ ಮುಖ್ಯಮಂತ್ರಿಯಾಗಿಲ್ಲ. ಈ ಬಾರಿಯಾದರೂ ಅವರು ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸುವ ಆದೇಶ ತರಬೇಕು ಎಂದರು.

ದತ್ತಪೀಠ ಹಿಂದುಳಿಗಳಿಗೆ ಸೇರಿದ್ದು ಎಂಬುದಕ್ಕೆ ಎಲ್ಲ ದಾಖಲೆಗಳೂ ಇವೆ. ದಾಖಲೆಗಳೆಲ್ಲವೂ ಸ್ಪಷ್ಟವಾಗಿಯೂ ಇವೆ. ಆದರೂ ಈ ವಿವಾದವನ್ನು ಜೀವಂತವಾಗಿರುವಂತೆ ನೋಡಿಕೊಳ್ಳುತ್ತಿರುವುದು ಸರಿಯಲ್ಲ. ದತ್ತಪೀಠವನ್ನು ಹಿಂದುಳಿಗಳಿಗೆ ವಹಿಸಿಕೊಡಲು ಯಡಿಯೂರಪ್ಪ ಅವರಿಗೆ ಒಳ್ಳೆಯ ಅವಕಾಶವಿದೆ. ಈಗಲೂ ಅವರು ದತ್ತಪೀಠ ಮುಕ್ತಿಗೊಳಿಸುವ ಕೆಲಸ ಮಾಡದಿದ್ದರೆ ಚಳಿಗಾಲದ ಅಧಿವೇಶನ ಮುಗಿದು ಮುಂದಿನ ಅಧಿವೇಶನದ ವೇಳೆಗೆ ರಾಜ್ಯಾದ್ಯಂತ ದೊಡ್ಡ ಹೋರಾಟ ಮಾಡಲಾಗುವುದು. ಈ ಹೋರಾಟದಲ್ಲಿ ಏನೇ ಅವಘಡಗಳಾದರೂ ಅದಕ್ಕೆ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದರು.

ಸಚಿವ ಸಿ.ಟಿ. ರವಿಯವರು ಸಹ ದತ್ತಮಾಲೆ ಧರಿಸಿದ ವೇಳೆಯೇ ತಮ್ಮ ಸರಕಾರ ಬಂದ 24ಗಂಟೆಗಳಲ್ಲಿ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಲಾಗುವುದು ಎಂದು ಹೇಳಿದ್ದರು. ಆದರೆ, ಈವರೆಗೂ ಆ ಕೆಲಸ ಮಾಡಿಸಲು ಆಗಿಲ್ಲ. ನಾಲಿಗೆ ಮೇಲೆ ಸ್ವಾಭಿಮಾನವಿದ್ದರೆ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಸಮಾಜ ಅವರನ್ನು ಕ್ಷಮಿಸಲ್ಲ ಎಂದರು.

 

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *