ದಾವಣಗೆರೆ: ಸಿರಿಗೆರೆಯ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ (ಜ.28ರಿಂದ ಫೆ.5ರವರೆಗೆ) ತರಳಬಾಳು ಹುಣ್ಣಿಮೆ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಜ.30ರಂದು ಸಂಜೆ 6ಕ್ಕೆ ಮಹಿಳಾ ಗೋಷ್ಠಿ ನಡೆಯಲಿದೆ. ಬೌದ್ಧ ಬಿಕ್ಕು ತೇನ್ಸಿಂಗ್ ಯೆಶಿ, ಮೌಲಾನ ಮಹಮ್ಮದ್ ಅನ್ವರ್ ಆಸಾದಿ ಆಶೀರ್ವಚನ ನೀಡಲಿದ್ದಾರೆ. ಧಾರ್ಮಿಕ ದತ್ತಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಎಸ್.ವಿ.ರಾಮಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ವಿಜಯಲಕ್ಷ್ಮಿ ಬಾಳೆಕುಂದ್ರಿ, ನಾಗಶ್ರೀ ತ್ಯಾಗರಾಜ್ ಇಂದುಶ್ರೀ, ಡಾ.ಸಿ.ಎನ್.ಪಾಟೀಲ ವಿಷಯಮಂಡನೆ ಮಾಡಲಿದ್ದಾರೆ.



