Connect with us

Dvgsuddi Kannada | online news portal | Kannada news online

ಈ ಬಾರಿಯ ಕೊಟ್ಟೂರು ತರಳಬಾಳು ಹುಣ್ಣಿಮೆ ಮಹೋತ್ಸವ ಮುಂದೂಡಿಕೆ

taralabalu hunnime 2022

ಪ್ರಮುಖ ಸುದ್ದಿ

ಈ ಬಾರಿಯ ಕೊಟ್ಟೂರು ತರಳಬಾಳು ಹುಣ್ಣಿಮೆ ಮಹೋತ್ಸವ ಮುಂದೂಡಿಕೆ

ದಾವಣಗೆರೆ: ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ 2022 ನೇ ಸಾಲಿನ ತರಳಬಾಳು ಹುಣ್ಣಿಮೆ ಮಹೋತ್ಸವ ಆಯೋಜಿಸಲಾಗಿತ್ತು. ಇದೀಗ ರಾಜ್ಯದಲ್ಲಿ  ಮತ್ತೆ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಹುಣ್ಣಿಮೆ ಮಹೋತ್ಸವನ್ನು ಮುಂದೂಡಲಾಗಿದೆ ಎಂದು  ಸಿರಿಗೆರೆಯ ಶ್ರೀ ತರಳಬಾಳು ಬೃಹನ್ಮಠದ ಕಾರ್ಯದರ್ಶಿ ತಿಳಿಸಿದ್ದಾರೆ.

ಹುಣ್ಣಿಮೆ ಮಹೋತ್ಸವ ವಿಚಾರವಾಗಿ ಆ ಭಾಗದ ಶಿಷ್ಯ ಪ್ರಮುಖರು,  ನಿನ್ನೆ (7-1-2022) ಸಿರಿಗೆರೆಗೆ ಬಂದು ಶ್ರೀ ಜಗದ್ಗುರುಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ದಿನೇ ದಿನೇ ಕೋವಿಡ್ ಸೋಂಕು ಹೆಚ್ಚುತ್ತಿದ್ದು,  ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರವು ವಿಧಿಸಿರುವ ನಿರ್ಬಂಧವನ್ನು ತಪ್ಪದೆ ಪಾಲಿಸಬೇಕೆಂದೂ, ಮುಂದಿನ ತಿಂಗಳು (ಫೆಬ್ರವರಿ 8 ರಿಂದ 16 ರ ವರೆಗೆ) ನಡೆಯಬೇಕಾಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಮುಂದೂಡಬೇಕೆಂದೂ ಸಭೆಯು ತೀರ್ಮಾನಿಸಲಾಯಿತು.

ಇದುವರೆಗೆ ಭಕ್ತಾದಿಗಳಿಂದ ಒಂದು ಕೋಟಿ ಅರವತ್ತೆಂಟು ಲಕ್ಷ ರೂ. ಗಳಿಗೂ ಹೆಚ್ಚು  ವಾಗ್ದಾನವಾಗಿರುವ ನಿಧಿಯನ್ನು ಸಂಗ್ರಹ ಮಾಡಬಾರದೆಂದೂ ಸಹ ತೀರ್ಮಾನಿಸಲಾಗಿದೆ.  ಸಾಂಪ್ರದಾಯಿಕವಾಗಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸದ್ಧರ್ಮ ಪೀಠಾರೋಹಣವನ್ನು ಮಠದಲ್ಲಿಯೇ ಸರಳವಾಗಿ ನಡೆಸಲು ತೀರ್ಮಾನಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top