ಚಿತ್ರದುರ್ಗ: ಜಿಲ್ಲೆಯ ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಲ್ಲಿ ಜ.28 ರಿಂದ ಫೆ.28ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ.
ಈ ಮಹೋತ್ಸವದ ಪೂರ್ವ ಸಿದ್ಧತಾ ಸಭೆಯ ನಾಳೆ (ಡಿ.04) ಮಧ್ಯಾಹ್ನ ಗಂಟೆಗೆ ಸಿರಿಗೆರೆಯ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಶ್ರೀಗಳ ನೇತೃತ್ವದಲ್ಲಿ ನಡೆಯಲಿದೆ. ಈ ಸಭೆಗೆ ಕೊಟ್ಟೂರು ತಾಲ್ಲೂಕಿನ ಭಕ್ತರು ಹಾಗೂ ಸಿರಿಗೆರೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಭಕ್ತರು ಭಾಗವಹಿಸಲಿದ್ದಾರೆ.



