ಈ ಬಾರಿಯ ಭರಮಸಾಗರ ತರಳಬಾಳು ಹುಣ್ಣಿಮೆ‌ ಮುಂದೂಡಿಕೆ; ಸಿರಿಗೆರೆಯಲ್ಲಿಯೇ ಸರಳ ಹುಣ್ಣಿಮೆ‌ ಆಚರಣೆ: ತರಳಬಾಳು ಶ್ರೀ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಭರಮಸಾಗರ: ಮುಂಬರುವ ಫೆಬ್ರವರಿ 16ರಿಂದ 24ರ ವರೆಗೆ ಭರಮಸಾಗರದಲ್ಲಿ ನಡೆಯಬೇಕಾಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು‌ ಮುಂದೂಡಲಾಗಿದೆ. ಮುಂದಿನ ವರ್ಷ ಮಹೋತ್ಸವ ಭರಮಸಾಗರದಲ್ಲಿ ನಡೆಸಲಾಗುವುದು ಎಂದು ಸಿರಿಗೆರೆಯ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಭರಮಸಾಗರ ಏತ ನೀರಾವರಿ ಯೋಜನೆಯ
ಭರಮಣ್ಣನಾಯಕನ ಕೆರೆ ವೀಕ್ಷಣೆ ಮಾಡಿದ ನಂತರ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವುದ್ದು, ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಜನರು ಕಷ್ಟದಲ್ಲಿರುವಾಗ ವಿಜೃಂಬಣೆಯ ಮಹೋತ್ಸವ ಮಾಡುವುದು ಸರಿಯಲ್ಲ. ಹೀಗಾಗಿ ಭರಮಸಾಗರದಲ್ಲಿ‌ ನಡೆಯಬೇಕಾಗಿದ್ದ ಅದ್ದೂರಿ ಆಚರಣೆ ಮುಂದೂಡಿ, ಈ ಭಾರಿ ಸಿರಿಗೆರೆಯ ಮಠದಲ್ಲಿಯೇ ಸರಳವಾಗಿ, ಸಾಂಪ್ರಾದಾಯಿಕವಾಗಿ ಆಚರಿಸಲಾಗುವುದೆಂದು ಪ್ರಕಟಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *