Connect with us

Dvgsuddi Kannada | online news portal | Kannada news online

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳ, ಸಮಾಧಿಗೆ ತರಳಬಾಳು ಶ್ರೀ ಭೇಟಿ

IMG 20221112 183620

ಪ್ರಮುಖ ಸುದ್ದಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳ, ಸಮಾಧಿಗೆ ತರಳಬಾಳು ಶ್ರೀ ಭೇಟಿ

ದಾವಣಗೆರೆ: ಬೆಳಗಾವಿ ಮೊಕ್ಕಾಂನಲ್ಲಿರುವ ಕ್ರಾಂತಿವೀರ, ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಮತ್ತು ಸಮಾಧಿ ಸ್ಥಳವಾದ ನಂದಗಡಕ್ಕೆ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿ ಗೌರವ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ‌ತಮ್ಮ ಸಂದೇಶ ರವಾನಿಸಿರುವ ಶ್ರೀಗಳು, ರಾಯಣ್ಣ ತನ್ನ ಹೋರಾಟ ಮತ್ತು ತ್ಯಾಗದಿಂದ ಮುಂದಿನ ಪೀಳಿಗೆಗೆ ಸ್ಫೂರ್ತಿಯಾದವರು. ಕಿತ್ತೂರು ಸಾಮ್ರಾಜ್ಯದ ಮೇಲಿನ ಅವನ ನಿರಂತರ ಪ್ರೀತಿ ಮತ್ತು ಚೆನ್ನಮ್ಮ ರಾಣಿಗೆ ನಿಷ್ಠೆಯ ಸೇವೆ, ಆದರ್ಶ, ಸ್ವಾತಂತ್ರ್ಯ ಹೋರಾಟ, ಸಾಹಸ ಹಾಗೂ ನಾಡ ಪ್ರೇಮದಿಂದ “ಲೆಜೆಂಡರಿ ವಾರಿಯರ್” ಎಂದು ಗೌರವಿಸಲ್ಪಟ್ಟನು. ಸಂಗೊಳ್ಳಿ ರಾಯಣ್ಣನಂತಹ ದೇಶಪ್ರೇಮಿಗೆ ಇದಕ್ಕಿಂತ ಉತ್ತಮವಾದ ವಿವರಣೆ ಇರಲಾರದು ಎಂದು ಇತಿಹಾಸದಲ್ಲಿ ದಾಖಲಾಗಿದೆ ಎಂದರು.

ಬ್ರಿಟಿಷರು ತಮ್ಮ ಕುಖ್ಯಾತ ಆಡಳಿತದಿಂದ “ಡಾಕ್ಟ್ರಿನ್ ಆಫ್ ಲ್ಯಾಪ್ಸ್” ಅನ್ನು ಅನುಸರಿಸಿ ಕಿತ್ತೂರು ರಾಜ್ಯವನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದರು ವಿರುದ್ಧ ಹೋರಾಡಿ ನೇಣಿಗೆ ಕೊರಳೊಡ್ಡಿದ ಸಂದರ್ಭದಲ್ಲಿಯೂ ಸಂಗೊಳ್ಳಿ ರಾಯಣ್ಣ : “ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ ಜನ್ಮ ತಾಳಿ, ಈ ಪುಣ್ಯ ಭೂಮಿಯಿಂದ ಬ್ರಿಟಿಷರ ವಿರುದ್ಧ ಹೋರಾಟವನ್ನು ಮುಂದುವರೆಸುವದಾಗಿದೆ ಹಾಗೂ ಬ್ರಿಟೀಷರನ್ನು ಹೊಡೆದೋಡಿಸಲು ಮನೆಗೊಬ್ಬ ರಾಯಣ್ಣ ಹುಟ್ಟಲಿ.”ಎಂದು ಹೇಳಿರುವುದು ರಾಯಣ್ಣನ ಪರಾಕ್ರಮ ಮತ್ತು ದೃಢಸಂಕಲ್ಪದ ದ್ಯೋತಕವಾಗಿದೆ. ರಾಯಣ್ಣನಂತಹ ಸ್ವಾತಂತ್ರ್ಯ ಹೋರಾಟಗಾರರು ಎಂದಿಗೂ ಜಾತಿಗೆ ಸೀಮಿತರಾದವರಲ್ಲ ಅವರು ರಾಷ್ಟದ ಆಸ್ತಿ ಮುಂದಿನ ಪೀಳಿಗೆಗೆ ಸದಾ ಆದರ್ಶಪ್ರಾಯವಾದವರು ಎಂದು ಶ್ರೀ ಜಗದ್ಗುರುಗಳು ಅಭಿಪ್ರಾಯಪಟ್ಟಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top