ಅ. 30 ವರೆಗೆ ಶಿಕ್ಷಕರು, ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆ ಘೋಷಿಸಿದ ಸರ್ಕಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಕೊರೊನಾ ವೈರಸ್ ಹೆಚ್ಚಿದ ಹಿನ್ನೆಲೆ  ಸರ್ಕಾರ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ   ಅ.30 ವರೆಗೆ ಮಧ್ಯಂತರ ರಜೆ ಘೋಷಿಸಿದೆ.

ಶಿಕ್ಷಕರ ಹಾಗೂ ಮಕ್ಕಳ ಹಿತದೃಷ್ಟಿಯಿಂದ 3 ವಾರಗಳ ಕಾಲ  ಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 12 ರಿಂದ 30 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ನೀಡಲಾಗಿದೆ. ಕೊರೊನಾದ ಸಂಕಷ್ಟದ ಕಾಲದಲ್ಲೂ ಶಿಕ್ಷಕರು ಶಾಲೆಗಳಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕನಿಷ್ಟ ಮಧ್ಯಂತರ ರಜೆಯನ್ನು ಅವರಿಗೆ ನೀಡಿಲ್ಲ. ಇದೀಗ ದಸರಾ ರಜೆ ಹಿನ್ನೆಲೆ ಶಿಕ್ಷಕರಿಗೆ ಮಧ್ಯಂತರ ರಜೆಯನ್ನು ಸರ್ಕಾರ ಘೋಷಿಸಿದೆ.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆ ನೀಡುವಂತೆ ಬೆಳಗ್ಗೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಜೆ ಘೋಷಿಸಿದ್ದಾರೆ. ಶಿಕ್ಷಕರು ನಾಳೆಯಿಂದಲೇ ರಜೆ ಪಡೆಯಬಹುದಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *