Connect with us

Dvgsuddi Kannada | online news portal | Kannada news online

ಶಿಕ್ಷಕ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರು; ಸೆ.30 ಕೊನೆ ದಿನ

ಪ್ರಮುಖ ಸುದ್ದಿ

ಶಿಕ್ಷಕ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರು; ಸೆ.30 ಕೊನೆ ದಿನ

ಬೆಂಗಳೂರು: ಶಿಕ್ಷಕರಾಗಲು ಬಯಸಿರುವ ಅಭ್ಯರ್ಥಿಗಳಿಗೆ ಶುಭ ಸುದ್ದಿ. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ (Karnataka Teacher eligibility test) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

1ರಿಂದ 5ನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿಇಡಿ ಉತ್ತೀರ್ಣರಾಗಿರಬೇಕು.
6 ರಿಂದ 8ನೇ ತರಗತಿಗೆ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಬಿಇಡಿ ಅಥವಾ ಪಾಸಾಗಿರಬೇಕು. ಕೊನೆಯ ವರ್ಷಗಳ ಡಿಇಡಿ, ಬಿಇಡಿ/ಬಿಎಸ್ಸಿ ಬಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟೆಂಬರ್ ತಿಂಗಳು 30 ಆಗಿದ್ದು, ಆನ್ ಲೈನ್ ಮೂಲಕವೇ ನಿಗದಿಪಡಿಸಿದ ಶುಲ್ಕ ಪಾವತಿಸಬೇಕು. ನವೆಂಬರ್ 06 ರಂದು ಬೆಳಗ್ಗೆ 9.00 ರಿಂದ 12ರವರೆಗೆ ಮತ್ತು ಮಧ್ಯಾಹ್ನ 1.30 ರಿಂದ 4 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತದೆ. ಪ್ರವೇಶ ಪತ್ರಗಳನ್ನು ಅಕ್ಟೋಬರ್ 21 ರಿಂದ ಆನ್ ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಅರ್ಜಿಯನ್ನು ಹಾಕಲು ಬಯಸುವವರು http://www.schooleducation.kar.nic.in ವೆಬ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಯು ಇತ್ತೀಚಿನ ಭಾವಚಿತ್ರ, ಮತ್ತು ಸಹಿ ಅಪ್ಲೋಡ್ ಮಾಡಬೇಕು. ಅಂಗವಿಕಲ ಕೋಟಾದಡಿ ವಿನಾಯಿತಿ ಬಯಸಿದಲ್ಲಿ ಪಿಎಚ್ ಪ್ರಮಾಣದಪತ್ರ ಅಪ್ಲೋಡ್ ಮಾಡಬೇಕು. ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರಹೊಂದಿರಬೇಕು.

ಶುಲ್ಕ- ಸಾಮಾನ್ಯವರ್ಗ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಪತ್ರಿಕೆ 1 ಕ್ಕೆ 700 ರೂಪಾಯಿ ಪತ್ರಿಕೆ 1 ಹಾಗೂ ಪತ್ರಿಕೆ 2 ಕ್ಕೆ ಸೇರಿ 1000 ರೂಪಾಯಿ ಪಾವತಿಸಬೇಕು. ಪಜಾ,ಪ.ವರ್ಗ, ದವರಿಗೆ ಪತ್ರಿಕೆ -1ಕ್ಕೆ 350 ರೂಪಾಯಿ ಪತ್ರಿಕೆ 1 ಮತ್ತು 2 ಸೇರಿ 500 ರೂಪಾಯಿ ಇರುತ್ತದೆ. ಎಲ್ಲಾ ಬ್ಯಾಂಕುಗಳಲ್ಲಿ ಇಂಟರ್ನೆಟ್ ಬ್ಯಾಂಕಿಂಗ್, ಡೆಬಿಟ್ ಅಥವಾ ಕ್ರೇಡಿಟ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಬಹುದು.

ಶಿಕ್ಷಕರ ಅರ್ಹತಾ ಪರೀಕ್ಷೆಯ ಅರ್ಜಿಯನ್ನು ವೆಬ್‌ ಸೈಟ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 30ಕ್ಕೆ ಅರ್ಜಿಯನ್ನು ಸಲ್ಲಿಸಲು ಕಡೆಯದಿನಾಂಕವನ್ನು ನಿಗಧಿ ಮಾಡಲಾಗಿದೆ. ಇನ್ನು ಅಕ್ಟೋಬರ್ 21ರ ಬಳಿಕ ವೆಬ್‌ಸೈಟ್ ನಲ್ಲಿ ಅರ್ಹತಾ ಪ್ರಮಾಣ ಪತ್ರವನ್ನು ಆನ್ಲೈನ್ ಮೂಲಕ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕ ನಮೂದಿಸಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ನವೆಂಬರ್ 6ಕ್ಕೆ ಪರೀಕ್ಷೆಯನ್ನು ನಿಗದಿ ಮಾಡಲಾಗಿದದ್ದು. ಬೆಳಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆಯು ನಡೆಯಲಿವೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top