ಡಿವಿಜಿ ಸುದ್ದಿ, ಬಾಗಲಕೋಟೆ: ಮಾಜಿ ಸಚಿವೆ ಉಮಾಶ್ರೀ ಅವರ ನಿವಾಸದಲ್ಲಿ ನಿನ್ನೆ (ನ.01) ತಡರಾತ್ರಿ ಕಳ್ಳತನ ನಡೆದಿದೆ.
ಜಿಲ್ಲೆಯ ರಬಕವಿಯ ವಿದ್ಯಾ ನಗರದಲ್ಲಿರುವ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬೆಂಗಳೂರಿನ ಅರ್ ಆರ್ ನಗರ ಚುನಾವಣೆ ಪ್ರಚಾರಕ್ಕೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಉಮಾಶ್ರೀ ಅವರು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದರು.
ತಡರಾತ್ರಿ ಮನೆ ಬೀಗ ಒಡೆದು ಕಳ್ಳರು ಒಳಗೆ ನುಗ್ಗಿದ್ದು, ಮನೆಯೊಳಗಿನ ಟ್ರಿಜರಿ ಒಡೆದಿದ್ದಾರೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಪೀಠೋಪಕರಣ, ದಿನ ಬಳಕೆಯ ವಸ್ತುಗಳು ಬಿಟ್ಟರೆ ಬೆಲೆ ಬಾಳುವ ವಸ್ತುಗಳು ಏನೂ ಇರಲಿಲ್ಲ ಎಂದು ತಿಳಿದು ಬಂದಿದೆ.ತೇರದಾಳ ಠಾಣೆ ಪೋಲಿಸರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.



