ಯುಗಾದಿ ಜಾತ್ರಾ ಮಹೋತ್ಸವ; ಉಚ್ಚಂಗಿದುರ್ಗದಲ್ಲಿ ವಿಶೇಷ ಪೂಜೆ- ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಧಾರ್ಮಿಕ ಪ್ರಸಿದ್ಧ ಉಚ್ಚoಗಿದುರ್ಗದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಏ.31 ರಿಂದ ಮೇ 04 ರವರೆಗೆ ನಡೆಯುತ್ತದೆ. ಏ.31 ರಂದು ಪಾದಗಟ್ಟೆಯ ಹತ್ತಿರ ಓಕಳಿಗುಣಿ ಪೂಜೆ, ಏ.01 ರಂದು ಯುಗಾದಿ ಅಮಾವಾಸ್ಯೆ,ಏ.2 ರಂದು ಧಾರ್ಮಿಕ ದಿನಾಚರಣೆ ಹಾಗೂ ಪಾದಗಟ್ಟೆ ಹತ್ತಿರ ಓಕಳಿ ಉತ್ಸವ , ಏ.3 ರಂದು ಚಂದ್ರದರ್ಶನ, ಆನೆಹೊಂಡದ ಉತ್ಸವ,ಏ.04 ರಂದು ದೇವಿಯ ಮಹಾಪೂಜೆ ಹಾಗೂ ಭಕ್ತಾದಿಗಳಿಂದ ವಿವಿಧ ಸೇವಾಸತ್ಕಾರ ಕಾರ್ಯಕ್ರಮಗಳು ನಡೆಯಲಿವೆ.

ವಿಶೇಷವಾಗಿ ಸರ್ಕಾರ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶದಂತೆ ಏ.02 ರಂದು ಶನಿವಾರ ಧಾರ್ಮಿಕ ಆಚರಣೆ ಪ್ರಯುಕ್ತ ದೇವಸ್ಥಾನದಲ್ಲಿ ಹೊಸ ಶುಭ ಕೃತ ನಾಮ ಸಂವತ್ಸರದ ರಾಶಿ ಫಲಗಳ ಮಾಹಿತಿ, ದೇವಸ್ಥಾನಕ್ಕೆ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ,ದೇವಿಯ ಭಜನೆ,ಚೌಟಕಿ ಪದಗಳು,ಬೇವು ಬೆಲ್ಲ ವಿತರಣೆ ಮೂಲಕ ಯುಗಾದಿ ಆಚರಿಸಲಾಗುತ್ತದೆ ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಕೋರಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *