ಐತಿಹಾಸಿಕ ಉಚ್ಚಂಗಿದುರ್ಗ ಜಾತ್ರಾ ಮಹೋತ್ಸವ ರದ್ದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಪನಹಳ್ಳಿ: ಕೋವಿಡ್ 2ನೇ ಅಲೆ ಹಿನ್ನೆಲೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಐತಿಹಾಸಿಕ ಶ್ರೀ ಉತ್ಸವಾಂಬ ದೇವಿಯ ಜಾತ್ರಾ ಮಹೋತ್ಸವ ರದ್ದಾಗಿದೆ.

ಐತಿಹಾಸಿಕ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಹಾಗೂ ಜಾತ್ರೆಗೆ ಆಗಮಿಸಲಿದ್ದಾರೆ. ಹೀಗಾಗಿ ಏ. 12ರಿಂದ 15ರ ವರೆಗೆ ಯುಗಾದಿ ಹಬ್ಬದಂದು  ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ನಿಷೇಧಿಸಿದೆ.

ದೇವಸ್ಥಾನದ ಗುಡ್ಡದ ಮೇಲೆ, ಪಾದಗಟ್ಟೆಯ ಹತ್ತಿರ, ಹಾಲಮ್ಮನ ತೋಪಿನಲ್ಲಿ ದೇವಿ ದರ್ಶನ ಹಾಗೂ ಭಕ್ತರ ಪ್ರವೇಶವನ್ನು ನಿಷೇಧಿಸಿದೆ.  ಭಕ್ತರು ಏ. 12 ರಿಂದ 15ರ ವರೆಗೆ  ಉಚ್ಚಂಗಿದುರ್ಗಕ್ಕೆ ದೇವಿಯ ದರ್ಶನ ಹಾಗೂ ಜಾತ್ರೆಗೆ ಬರಬಾರದು ಎಂದು ಬಳ್ಳಾರಿ ಜಿಲ್ಲೆಯ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಪ್ರಕಾಶ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *