Connect with us

Dvgsuddi Kannada | online news portal | Kannada news online

ಏ.25ರಂದು ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ರಥೋತ್ಸವ; 26ರಂದು ಶಿಖರ ತೈಲಾಭಿಷೇಕ

ಪ್ರಮುಖ ಸುದ್ದಿ

ಏ.25ರಂದು ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ರಥೋತ್ಸವ; 26ರಂದು ಶಿಖರ ತೈಲಾಭಿಷೇಕ

ವಿಜಯನಗರ: ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಉಜ್ಜಿಯಿನಿ ಪೀಠದ ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ರಥೋತ್ಸವ ‌ಏ.25 ರಂದು ಮಂಗಳವಾರ ಜರುಗಲಿದೆ. 26 ರಂದು ಶಿಖರ ತೈಲಾಭಿಷೇಕ ನಡೆಯಲಿದೆ ಎಂದು ತಹಶೀಲ್ದಾರ್ ಎಂ.ಕುಮಾರಸ್ವಾಮಿ ತಿಳಿಸಿದರು.

ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ
ಅವರು ಮಾತನಾಡಿ, ಉಜ್ಜಿನಿ ರಥೋತ್ಸವದ ಸಂದರ್ಭದಲ್ಲಿ ಇಲಾಖಾಧಿಕಾರಿಗಳಿಗೆ ವಹಿಸಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.ಜಾತ್ರಾ ಸಂದರ್ಭದಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳೇ ಹೊಣೆ.ಸುತ್ತಮುತ್ತಲಿನ ಪಟ್ಟಣಗಳಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಹಾಗೂ
ಗ್ರಾಮದ ಹೊರವಲಯಗಳಲ್ಲಿ ತಾತ್ಕಾಲಿಕ ಬಸ್ ನಿಲ್ದಾಣಗಳನ್ನು ತೆರೆಯುವಂತೆ ಆದೇಶಿಸಿದರು.

ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಮಾತನಾಡಿ, ರಥೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಬಂದೋಬಸ್ತಿಗಾಗಿ
ಹೆಚ್ಚುವರಿ ಸಿಬ್ಬಂದಿ‌ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಪಿಐ ವೆಂಕಟಸ್ವಾಮಿ,
ಪಿ.ಎಸ್.ಐ. ವೆಂಕಟೇಶ್, ಗ್ರಾಮಸ್ಥರು ಹಾಗೂ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top