Connect with us

Dvgsuddi Kannada | online news portal | Kannada news online

ಯುಪಿಎಸ್ ಸಿ ಪರೀಕ್ಷೆ ಮೊದಲ ಪ್ರಯತ್ನದಲ್ಲಿಯೇ ದಾವಣಗೆರೆಯ ಅವಿನಾಶ್ ಗೆ 31 ನೇ ರ‍್ಯಾಂಕ್‌; ರಾಜ್ಯಕ್ಕೆ ಮೊದಲ ಸ್ಥಾನ

upc avinash

ದಾವಣಗೆರೆ

ಯುಪಿಎಸ್ ಸಿ ಪರೀಕ್ಷೆ ಮೊದಲ ಪ್ರಯತ್ನದಲ್ಲಿಯೇ ದಾವಣಗೆರೆಯ ಅವಿನಾಶ್ ಗೆ 31 ನೇ ರ‍್ಯಾಂಕ್‌; ರಾಜ್ಯಕ್ಕೆ ಮೊದಲ ಸ್ಥಾನ

ದಾವಣಗೆರೆ: ಕೇಂದ್ರ ಲೋಕಸೇವಾ ಆಯೋಗ( ಯುಪಿಎಸ್ ಸಿ )  ಪರೀಕ್ಷೆಯಲ್ಲಿ ದಾವಣಗೆರೆಯ ಅವಿನಾಶ್‌ ವಿ. ಅವರು ಮೊದಲ ಪ್ರಯತ್ನದಲ್ಲೇ 31ನೇ ರ‍್ಯಾಂಕ್‌ ಗಳಿಸಿ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಜನತಾ ಲಾಡ್ಜ್‌, ಜನತಾ ಡಿಲಕ್ಸ್‌, ಆನಂದ ರೆಸಿಡೆನ್ಸಿ ಮಾಲೀಕ ವಿಠಲರಾವ್‌ ಪುತ್ರರಾಗಿರುವ  ಅವಿನಾಶ್‌ ದಾವಣಗೆರೆಯ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣ, ತೋಳಹುಣಸೆಯ ಪಿಎಸ್‌ಎಸ್‌ಇಎಂಆರ್‌ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರೈಸಿದ್ದರು. ಧವನ್‌ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪಿಯು ಮುಗಿಸಿದ್ದರು. ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯುನಿವರ್ಸಿಟಿಯಲ್ಲಿ 2020ರಲ್ಲಿ ಐದು ವರ್ಷಗಳ ಕಾನೂನು ಪದವಿಯನ್ನು ಪಡೆದಿದ್ದ. ನಂತರ   ಬೆಂಗಳೂರಿನ ‘ಇನ್‌ಸೈಟ್ಸ್‌ ಐಎಎಸ್‌’ ಕೋಚಿಂಗ್‌ ಸೆಂಟರ್‌ನಲ್ಲಿ ಒಂದು ವರ್ಷ ತರಬೇತಿ ಪಡೆದು ಯುಪಿಎಸ್‌ಸಿ ಪರೀಕ್ಷೆ ಬರೆದು ಮೊದಲ ಪ್ರಯತ್ನದಲ್ಲೇ 31ನೇ ರ‍್ಯಾಂಕ ಪಡೆದು ರಾಜ್ಯದ ಗಮನ ಸೆಳೆದಿದ್ದಾರೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top