Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತರನ್ನು ಒಬಿಸಿಗೆ ಸೇರಿಸುವ ತೀರ್ಮಾನ ಸದ್ಯಕ್ಕಿಲ್ಲ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ವೀರಶೈವ ಲಿಂಗಾಯತರನ್ನು ಒಬಿಸಿಗೆ ಸೇರಿಸುವ ತೀರ್ಮಾನ ಸದ್ಯಕ್ಕಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ವೀರಶೈವ -ಲಿಂಗಾಯತ ಸಮುದಾಯವನ್ನ ಓಬಿಸಿಗೆ ಸೇರಿಸುವ ವಿಚಾರವಾಗಿ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಸಚಿವ ಸಂಪುಟ ಸಭೆಗೂ ಮುನ್ನ ಮಾತನಾಡಿದ ಅವರು, ಲಿಂಗಾಯತರನ್ನ ಓಬಿಸಿಗೆ ಸೇರಿಸುವ ಸಂಬಂಧ ಯಾವುದೇ ತೀರ್ಮಾನ ಇಲ್ಲ. ಮೊದಲು ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ ಎಂದರು.

ಯಾವುದೇ ಆತುರದ ನಿರ್ಧಾರ ಬೇಡವೆಂದು ಸಂಪುಟ ಸಹೋದ್ಯೋಗಿಗಳು ಹೇಳಿದ್ದಾರೆ. ಈ ವಿಚಾರವಾಗಿ ಮೊದಲು ದೆಹಲಿಗೆ ಹೋಗಿ ಕೇಂದ್ರದ ನಾಯಕರ ಜೊತೆ ಚರ್ಚಿಸುತ್ತೇವೆ. ಆ ಬಳಿಕವಷ್ಟೇ ಮುಂದಿನ ತೀರ್ಮಾನ ಎಂದು ಸ್ಪಷ್ಟಪಡಿಸಿದರು.  ಈ ವೇಳೆ ಸಂಪುಟ ವಿಸ್ತರಣೆ, ಪುನಾಚರನೆ ಕುರಿತಾಗಿ ಪ್ರತಿಕ್ರಿಯಿಸಿದ ಬಿಎಸ್​ವೈ, ಈಗಷ್ಟೇ ಅಮಿತ್ ಶಾ ಜೊತೆ ಮಾತನ್ನಾಡಿದ್ದೇನೆ. ದೂರವಾಣಿ ಮೂಲಕ ಚರ್ಚಿಸಿದೆ. ಇನ್ನೆರಡು ದಿನಗಳಲ್ಲಿ ಪಟ್ಟಿ ಬರಲಿದೆ ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top