Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತರನ್ನು ಒಬಿಸಿಗೆ ಸೇರಿಸುವ ತೀರ್ಮಾನ ಸದ್ಯಕ್ಕಿಲ್ಲ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ವೀರಶೈವ ಲಿಂಗಾಯತರನ್ನು ಒಬಿಸಿಗೆ ಸೇರಿಸುವ ತೀರ್ಮಾನ ಸದ್ಯಕ್ಕಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ವೀರಶೈವ -ಲಿಂಗಾಯತ ಸಮುದಾಯವನ್ನ ಓಬಿಸಿಗೆ ಸೇರಿಸುವ ವಿಚಾರವಾಗಿ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಸಚಿವ ಸಂಪುಟ ಸಭೆಗೂ ಮುನ್ನ ಮಾತನಾಡಿದ ಅವರು, ಲಿಂಗಾಯತರನ್ನ ಓಬಿಸಿಗೆ ಸೇರಿಸುವ ಸಂಬಂಧ ಯಾವುದೇ ತೀರ್ಮಾನ ಇಲ್ಲ. ಮೊದಲು ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ ಎಂದರು.

ಯಾವುದೇ ಆತುರದ ನಿರ್ಧಾರ ಬೇಡವೆಂದು ಸಂಪುಟ ಸಹೋದ್ಯೋಗಿಗಳು ಹೇಳಿದ್ದಾರೆ. ಈ ವಿಚಾರವಾಗಿ ಮೊದಲು ದೆಹಲಿಗೆ ಹೋಗಿ ಕೇಂದ್ರದ ನಾಯಕರ ಜೊತೆ ಚರ್ಚಿಸುತ್ತೇವೆ. ಆ ಬಳಿಕವಷ್ಟೇ ಮುಂದಿನ ತೀರ್ಮಾನ ಎಂದು ಸ್ಪಷ್ಟಪಡಿಸಿದರು.  ಈ ವೇಳೆ ಸಂಪುಟ ವಿಸ್ತರಣೆ, ಪುನಾಚರನೆ ಕುರಿತಾಗಿ ಪ್ರತಿಕ್ರಿಯಿಸಿದ ಬಿಎಸ್​ವೈ, ಈಗಷ್ಟೇ ಅಮಿತ್ ಶಾ ಜೊತೆ ಮಾತನ್ನಾಡಿದ್ದೇನೆ. ದೂರವಾಣಿ ಮೂಲಕ ಚರ್ಚಿಸಿದೆ. ಇನ್ನೆರಡು ದಿನಗಳಲ್ಲಿ ಪಟ್ಟಿ ಬರಲಿದೆ ಎಂದು ತಿಳಿಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top