Connect with us

Dvgsuddi Kannada | online news portal | Kannada news online

ಹೂವಿನ ಹಡಗಲಿಯಲ್ಲಿ ಹೃದಯವಿದ್ರಾವಕ ಘಟನೆ; ಇಬ್ಬರು ಮಕ್ಕಳ ಕತ್ತು ಹಿಸುಕಿ ತಾನು ನೇಣಿಗೆ ಶರಣಾದ ತಾಯಿ..!!!

ಪ್ರಮುಖ ಸುದ್ದಿ

ಹೂವಿನ ಹಡಗಲಿಯಲ್ಲಿ ಹೃದಯವಿದ್ರಾವಕ ಘಟನೆ; ಇಬ್ಬರು ಮಕ್ಕಳ ಕತ್ತು ಹಿಸುಕಿ ತಾನು ನೇಣಿಗೆ ಶರಣಾದ ತಾಯಿ..!!!

ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಸಾಯಿಸಿ, ಬಳಿಕ ತಾಯಿಯೊಬ್ಬಳು‌ ತಾನು ನೇಣಿಗೆ ಶರಣಾದ ದುರ್ಘಟನೆ ನಡೆದಿದೆ.

ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಶಿವಮ್ಮ(24) ಮೂರು ವರ್ಷದ ದುರ್ಗಮ್ಮ, 10 ತಿಂಗಳ ಈಶ್ವರಿ ಮೃತ ದುರ್ದೈವಿಗಳು.ವಿಷಯ ತಿಳಿಯುತ್ತಿದ್ದಂತೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಶಂಕೆ ವ್ಯಕ್ತವಾಗಿದೆ, ಘಟನೆ ಬಳಿಕ ಪತಿ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top