Connect with us

Dvgsuddi Kannada | online news portal | Kannada news online

ಹೊಸಪೇಟೆ: ಸರ್ಕಾರಿ, ಖಾಸಗಿ ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿ ನಾಲ್ವರ ಸಾವು  

ಪ್ರಮುಖ ಸುದ್ದಿ

ಹೊಸಪೇಟೆ: ಸರ್ಕಾರಿ, ಖಾಸಗಿ ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿ ನಾಲ್ವರ ಸಾವು  

ವಿಜಯನಗರ: ಹೊಸಪೇಟೆ ತಾಲೂಕಿನ ಹಾರುವನಹಳ್ಳಿಯಲ್ಲಿ ಸರ್ಕಾರಿ , ಖಾಸಗಿ ಇನೋವಾ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.  ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿ ನಾಲ್ವರ ಸಾವನ್ನಪ್ಪಿದ್ದಾರೆ. ಇನ್ನು ಎಂಟು ಜನ ಸ್ಥಿತಿ ಗಂಭೀರವಾಗಿದೆ.

ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸರ್ಕಾರಿ ಕಾರಿನಲ್ಲಿದ್ದ ಕೃಷ್ಣ ಜಲಭಾಗ್ಯ ನಿಗಮ ಮಂಡಳಿ ಅಧಿಕಾರಿ ಕೋದಂಡ ರಾಮಸ್ವಾಮಿ,  ಜಿತೇಂದ್ರ ಪನ್ವರ್ , ಖಾಸಗಿ ಕಾರಿನಲ್ಲಿದ್ದ ಕಾವ್ಯ ಮತ್ತು ಶರಣಬಸವ ಸಾವನ್ನಪ್ಪಿದ್ಧಾರೆ. 8 ಜನರ ಸ್ಥಿತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡೂ ಕಾರುಗಳು ಸಂಪೂರ್ಣವಾಗಿ  ನಜ್ಜುಗುಜ್ಜಾಗಿವೆ.

ತಿಪಟೂರಿನಿಂದ ಕುಷ್ಟಗಿಯತ್ತ ಹೊರಟಿದ್ದ ಖಾಸಗಿ ಕಾರಿನ ಟೈಯರ್​ ಬ್ಲಾಸ್ಟ್ ಆಗಿದ್ದರಿಂದ  ಡಿವೈಡರ್ ಮೇಲೆ ಹಾರಿದು ಈ ಅವಘಡ ಸಂಭವಿಸಿದೆ.  ಈ ಕಾರು ಹೊಸಪೇಟೆ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಸರ್ಕಾರಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top