Connect with us

Dvgsuddi Kannada | online news portal | Kannada news online

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್;  ನ.23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಪ್ರಮುಖ ಸುದ್ದಿ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್;  ನ.23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಡಿವಿಜಿ ಸುದ್ದಿ, ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನವೆಂಬರ್ 23ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ವಿನಯ್ ಕುಲಕರ್ಣಿಗೆ ಮತ್ತೆ ಶಾಕ್ ಎದುರಾಗಿದ್ದು,  ಮಾಜಿ ಸಚಿವರು ಜೈಲಿನಲ್ಲಿಯೇ ಈ ಬಾರಿಯ ದೀಪಾವಳಿ ಆಚರಿಸುವಂತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಗರದ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದ್ದು, ನವೆಂಬರ್ 23ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.  ಕಳೆದೆರಡು ದಿನಗಳಿಂದ ತಮ್ಮ ಕಸ್ಟಡಿಯಲ್ಲಿರುವ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ದಾಖಲೆಗಳ ಮೂಲಕ ವಿಚಾರಣೆ ನಡೆಸುತ್ತಿದ್ಧಾರೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶ, ಸುಳ್ಳು ದಾಖಲೆ ಸೃಷ್ಟಿ, ಪೊಲೀಸ್ ಇಲಾಖೆ ಮೇಲೆ ಒತ್ತಡ, ಹಂತಕರಿಗೆ ಆಶ್ರಯ, ಕೊಲೆಯಾದ ಯೋಗೇಶ್ ಗೌಡರ ಪತ್ನಿಯನ್ನ ಪಕ್ಷಕ್ಕೆ ಕರೆತಂದಿದ್ದು. ಹೀಗೆ ಹಲವು ದಾಖಲೆ ಇಟ್ಟುಕೊಂಡು ಸಿಬಿಐ ವಿನಯ್ ಕುಲಕರ್ಣಿ ವಿಚಾರಣೆ ನಡೆಸುತ್ತಿದೆ.

ಮಾಜಿ ಸಚಿವ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮೇಗೌಡ, ಸಾಕ್ಷಿ ನಾಶಕ್ಕೆ ಸಹಕರಿಸಿದ ಸೋದರಮಾವ ಚಂದ್ರಶೇಖರ ಇಂಡಿ, ಯೋಗೀಶ್ ಗೌಡ ಪತ್ನಿ ಮಲ್ಲರನ್ನು ಕಾಂಗ್ರೆಸ್ಸಿಗೆ ಕರೆತಂದ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಹಾಗೂ ಮಲ್ಲಮ್ಮರನ್ನು ಕೂಡ ವಿನಯ್ ಕುಲಕರ್ಣಿ ಸಮ್ಮುಖದಲ್ಲೆ ಸಿಬಿಐ ತೀವ್ರ ವಿಚಾರಣೆಗೆ ಒಳಪಡಿಸಿತ್ತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top