ಹರಿಹರ: ಮಹರ್ಷಿ ವಾಲ್ಮೀಕಿ ಜಾತ್ರೆ ಫೆ.8,9ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜನಹಳ್ಳಿಯ ವಾಲ್ಮೀಕಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡ, ಜಾತ್ರಾ ಮಹೋತ್ಸವವು ಯಾವುದೇ ಅಡೆತಡೆ ಆಗದಂತೆ ನಿಭಾಯಿಸುವುದಕ್ಕೆ ಇಲಾಖೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮತ್ತು ಸಚಿವರು ಶಾಸಕರು ಸಂಸದರು ಹಾಗೂ ವಿವಿಧ ಮಠಾಧೀಶರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಾರ. ಜಿಲ್ಲಾಡಾಳಿತ, ಜಿಲ್ಲಾ ಪಂಚಾಯತ್ ತಾಲ್ಲೂಕು ಆಡಳಿತ, ಬೆಸ್ಕಾಂ, ನಗರಸಭೆ, ತಾಪಂ, ಜಿಲ್ಲಾ ಮಟ್ಟದ ತಾಲ್ಲೂಕು ಮಟ್ಟದ ಅಧಿಕಾರಿಗಳು ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಪೊಲೀಸ್ ಇಲಾಖೆ ಬರುವಂತಹ ವಾಹನಗಳಿಗೆ ನಿಲ್ದಾಣದ ವ್ಯವಸ್ಥೆ, ಭಕ್ತಾದಿಗಳು ಹೋಗೋದಕ್ಕೆ ಬರೋದಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ, ಹರಿಹರ ಶಾಸಕ ಎಸ್ ರಾಮಪ್ಪ, ಜಗಳೂರು ಶಾಸಕ ಎಸ್. ವಿ. ರಾಮಚಂದ್ರಪ್ಪ .ಕಾಮ್ರೇಡ್ ಎಚ್ ಕೆ ರಾಮಚಂದ್ರಪ್ಪ .ಮಠದ ಆಡಳಿತ ಅಧಿಕಾರಿ ಓಬಳೇಶಪ್ಪ, ಡಾಕ್ಟರ್ ರಾಮಪ್ಪ .ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಪದ್ಮಬಸಂತಪ್ಪ .ಜಿಲ್ಲಾ ವರಿಷ್ಠಾಧಿಕಾರಿ ಹನಮಂತರಾಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ ವರ್ಗದವರು ಮಠದ ಆಡಳಿತ ಮಂಡಳಿಯ ಸದಸ್ಯರ ಸದ್ಭಕ್ತರು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು



