ದಾವಣಗೆರೆ ಮಹಾನಗರ ಪಾಲಿಕೆ ಸಿವಿಲ್ ಇಂಜಿನಿಯರ್ ಪತ್ನಿ ತನ್ನ 9 ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಹಿಳೆಯೊಬ್ಬರು 9 ತಿಂಗಳ ಹಸುಗೂಸಿಗೆ ನೇಣು ಹಾಕಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಗಳೂರಿನ ಜೆಸಿಆರ್ ಬಡಾವಣೆಯಲ್ಲಿ ನಡೆದಿದೆ.

ದಾವಣಗೆರೆ ಮಹಾನಗರ ಪಾಲಿಕೆಯ ಸಿವಿಲ್ ಇಂಜಿನಿಯರ್ ಮನೋಜ್ ಕುಮಾರ್ ಪತ್ನಿ ಲಿಖಿತಾ (25) ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ 10 ತಿಂಗಳ ಮಗು ಅನೀಶ್ ನನ್ನು ನೇಣುಹಾಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜ್ ಕುಮಾರ್ ಲಿಖಿತಾಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತದೆ. ಆತನ ವರ್ತನೆ ಮತ್ತು ಅಕ್ರಮ ಸಂಬಂಧದಿಂದ ನಮ್ಮ ಮಗಳು ನೊಂದಿದ್ದಳು ಎಂದು ಪೊಲೀಸರಿಗೆ ಪಾಲಕರು ದೂರು ನೀಡಿದ್ದಾರೆ.

ಒಂದು ವರ್ಷದ ಹಿಂದೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಜಿನಿಯರ್ ಮನೋಜ್ ಕುಮಾರ್‌ ಜೊತೆ ವಿವಾಹವಾಗಿದ್ದ ನಿಖಿತಾ ನಿನ್ನೆ ಇದ್ದಕ್ಕಿದ್ದಂತೆ ಮಗನೊಂದಿಗೆ ಜಗಳೂರಿನ ಜೆಸಿಆರ್ ಬಡಾವಣೆಯಲ್ಲಿರುವ ತನ್ನ ತವರಿಗೆ ಬಂದಿದ್ದರು. ಈ ವೇಳೆ ಶಿಕ್ಷಕರಾಗಿದ್ದ ತಂದೆ -ತಾಯಿಗಳಿಬ್ಬರು ಇಂದು ಬೆಳಗ್ಗೆ ಶಾಲೆಗೆ ಹೋದ ನಂತರ ನಿಖಿತಾ ಮೊದಲು ಮಗನನ್ನು ನೇಣಿನ ಕುಣಿಕೆಗೆ ಹಾಕಿ ಕೊಂದು ಬಳಿಕ ತಾನು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರು ಲಕ್ಷ ರೂಪಾಯಿ ವರದಕ್ಷಿಣೆ, ಚಿನ್ನಾಭರಣ ಕೊಟ್ಟು ವಿವಾಹ ಮಾಡಿಕೊಟ್ಟಿದ್ದರೂ ಪ್ರತಿ ದಿನ ಮನೋಜ್ ಆಕೆಯನ್ನು ನಿಂದಿಸುವ ಜೊತೆಗೆ ತನ್ನ ತಾಯಿ ಮಾತು ಕೇಳಿಕೊಂಡು ತವರಿನಿಂದ ಹಣ,ಒಡವೆ ತರುವಂತೆ ಪೀಡಿಸುತ್ತಿದ್ದ ಎಂದು ಮೃತಳ ಪೋಷಕರು ದೂರಿದ್ದಾರೆ.

ಮದುವೆಯಾದಾಗಿನಿಂದಲೂ ನಿಖಿತಾಗೆ ಕಿರುಕುಳ ಕೊಡುತ್ತಿದ್ದ ಮನೋಜ್‌ ಆಕೆಯನ್ನು ಸರಿಯಾಗಿ ಮಾತನಾಡಿಸುತ್ತಿರಲಿಲ್ಲ. ಜೊತೆಗೆ ಬೇರೆಯವಳ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ನಿಖಿತಾ ತನ್ನ 9 ತಿಂಗಳ ಮಗುವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *