Connect with us

Dvgsuddi Kannada | online news portal | Kannada news online

ದಾವಣಗೆರೆ: ಭೀಕರ ಸರಣಿ ಅಪಘಾತದಲ್ಲಿ ಇಬ್ಬರ‌ ಸಾವು; ಚಾಲಕನಿಗೆ ಗಂಭೀರ ಗಾಯ

FB IMG 1663314465179

ಪ್ರಮುಖ ಸುದ್ದಿ

ದಾವಣಗೆರೆ: ಭೀಕರ ಸರಣಿ ಅಪಘಾತದಲ್ಲಿ ಇಬ್ಬರ‌ ಸಾವು; ಚಾಲಕನಿಗೆ ಗಂಭೀರ ಗಾಯ

ದಾವಣಗೆರೆ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಎಚ್. ಕಲ್ಪನಹಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.ಕಾರಿಗನೂರಿನ ಮೊರಾರ್ಜಿ ದೇಸಾಯಿ ಶಾಲೆ ಶಿಕ್ಷಕಿ ಜ್ಯೋತಿ (43) ಮತ್ತು ಪವಾಡರಂಗವ್ವನಹಳ್ಳಿಯ ಮಂಜುನಾಥ್ (68) ಎಂಬುವರು ಮೃತರಾಗಿದ್ದಾರೆ.

ಶಿಕ್ಷಕಿ ಜ್ಯೋತಿ ಅವರ ಪತಿಗೆ ಹೃದಯಾಘಾತ ಸಂಭವಿಸಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಆಂಬುಲೆನ್ಸ್​ ಮೂಲಕ ಕರೆತರಲಾಗುತ್ತಿತ್ತು. ಆಂಬುಲೆನ್ಸ್​ ಚಾಲಕ ಟ್ರ್ಯಾಕ್ಟರ್ ಹಿಂದಿಕ್ಕಲು ಯತ್ನಿಸಿದ್ದಾನೆ. ಆಗ ಟ್ರ್ಯಾಲಿಗೆ ಆಂಬುಲೆನ್ಸ್ ರಭಸವಾಗಿ​ ಡಿಕ್ಕಿಯಾಗಿದೆ. ಈ ವೇಳೆ ಆಂಬುಲೆನ್ಸ್​ನಲ್ಲಿದ್ದ ಶಿಕ್ಷಕಿ ಜ್ಯೋತಿ ಅವರ ತಲೆಗೆ ಬಲವಾದ ಪೆಟ್ಟಾಗಿ ಗಂಭೀರ ಗಾಯಗೊಂಡಿದ್ದರು. ನಂತರ ಅವರನ್ನು ಮತ್ತೊಂದು ಆಯಂಬುಲೆನ್ಸ್ ಮೂಲಕ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ರಭಸಕ್ಕೆ ಗಾಬರಿಗೊಂಡು ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ದಾವಣಗೆರೆಗೆ ತೆರಳುತ್ತಿದ್ದ ಪವಾಡರಂಗವ್ವನಹಳ್ಳಿಯ ಮಂಜುನಾಥ್ ಅವರ ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಬುಲೆನ್ಸ್ ಚಾಲಕ ಮಹಮದ್ ಮೀರನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

 

n423180350fdd1f2efb58ae2883b5caeef285dac0755f6281b8e9892ce867d58f36ac9f93a

ಘಟನಾ ಸ್ಥಳಕ್ಕೆ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚುವರಿ ಎಸ್ಪಿ ಆರ್. ಬಿ.ಬಸರಗಿ, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top