Connect with us

Dvgsuddi Kannada | online news portal | Kannada news online

ಶೀಘ್ರವೇ ರಾಜ್ಯದಲ್ಲಿ ಹೊಸ ಮರಳು ನೀತಿ: ಸಚಿವ ಮುರುಗೇಶ್ ನಿರಾಣಿ

ಪ್ರಮುಖ ಸುದ್ದಿ

ಶೀಘ್ರವೇ ರಾಜ್ಯದಲ್ಲಿ ಹೊಸ ಮರಳು ನೀತಿ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಎಲ್ಲರಿಗೆ ಮರಳು ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಹೊಸ ಮರಳು ನೀತಿ ಶೀಘ್ರದಲ್ಲಿ  ಜಾರಿಗೆ ತರಲಾಗುವುದು ಎಂದು ಗಣಿ ಹಾಗೂ ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ವಿಕಾಸಸೌಧದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಹಳ್ಳ, ಕೊಳ್ಳಗಳಲ್ಲಿ ಸಿಗುವ ಉಸುಕು ಬಳಕೆಗೆ ಅವಕಾಶ ಮಾಡಿಕೊಡಲಾಗುವುದು. ಎತ್ತಿನಗಾಡಿ, ಟ್ರ್ಯಾಕ್ಟರ್ʼಗಳಲ್ಲಿ ಮರಳು ತರಲು ಅವಕಾಶ ನೀಡಲಾಗುವುದು.  ಇದುವರೆಗೆ ಎಲ್ಲದಕ್ಕೂ ನಿರ್ಬಂಧ ಹೇರಲಾಗಿತ್ತು.

ಇದು ಸಣ್ಣ ರೈತರು, ಜನಸಾಮಾನ್ಯರಿಗೆ ತೊಂದರೆಯಾಗಿತ್ತು.  ಮರಳು ಗಣಿಗಾರಿಕೆ ನಿಯಮಗಳನ್ನ ಸರಳಗೊಳಿಸುವ ಮೂಲಕ ಇನ್ಮುಂದೆ ಸುಲಭವಾಗಿ ಬಳಸಿಕೊಳ್ಳಲು ಅವಕಾಶ ಮಾಡಿಕೊಡುತ್ತೇವೆ. ಹೊಸ ಮರಳು ನೀತಿ ಶೀಘ್ರದಲ್ಲೇ ಜಾರಿಗೆ ತರುತ್ತೇವೆ.  ಪ್ರಸ್ತುತ ಮೂರು ಕಮಿಟಿ ರಚಿಸಿದ್ದೇವೆ, ಆಂಧ್ರಕ್ಕೆ ಇಂದು ಒಂದು ಕಮಿಟಿ ಹೋಗಿದ್ದು ಅಲ್ಲಿನ ನೀತಿಯ ಬಗ್ಗೆ ಅಧ್ಯಯನ ಮಾಡಲಿದೆ ಹಾಗೂ ಈ ಬಗ್ಗೆ ವರದಿ ನೀಡಲಿದೆ ಎಂದು ತಿಳಿಸಿದರು

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});