ಒಂದು ವಾರದೊಳಗೆ ವಿದ್ಯುತ್ ದರ ಏರಿಕೆ ಕೈ ಬಿಡಿ, ಇಲ್ಲದಿದ್ದರೆ ಹೋರಾಟ: ಡಿ.ಕೆ. ಶಿವಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಸಂಕಷ್ಟ ಸಮಯದಲ್ಲಿ ವಿದ್ಯುತ್ ದರ ಏರಿಕೆಯನ್ನು ಸರ್ಕಾರ  ಕೈ ಬಿಡಬೇಕು.  ಒಂದು ವಾರದೊಳಗೆ ಆದೇಶ ವಾಪಸ್ ಪಡೆಯದಿದ್ದರೆ  ಹೋರಾಟ ಅನಿವಾರ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ  ಆರ್ಥಿಕ ಸಂಕಷ್ಟದ  ಸಂದರ್ಭದಲ್ಲಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಿದೆ.  ಇದು ಜನರ ವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ಯಪಡಿಸಿದರು.

ಕೈಗಾರಿಕೆ, ವ್ಯಾಪಾರ, ರೈತರಿಗೆ ದರ ಏರಿಕೆ ಹೊರೆಯಾಗಿದೆ. ದರ ಏರಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು. ಒಂದೂವರೆ ವರ್ಷ ದರ ಏರಿಕೆ ತೀರ್ಮಾನ ಕೈಬಿಡಬೇಕು. ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು. ಇನ್ನು ನಾನು ಇಂಧನ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ನನಗೂ ಅಲ್ಪಸ್ವಲ್ಪ ಮಾಹಿತಿ ಇದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಇಂತಹ ವೇಳೆ ಏರಿಕೆ ಮಾಡಿದ್ದು ಸರಿಯಲ್ಲ. ಕೂಡಲೇ ಸರ್ಕಾರ ಆದೇಶವನ್ನು ವಾಪಸ್ ಪಡೆಯಬೇಕು. ನ. 23 ರಿಂದ 28ರ ವರೆಗೆ ತಾಲ್ಲೂಕು ಕೇಂದ್ರದಲ್ಲಿ ಹೋರಾಟ ನಡೆಸಲಾಗುವುದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *