ವಿಧಾನ ಪರಿಷತ್ ನಲ್ಲಿ ಬಿಜೆಪಿಯೇ ಗುಂಡಾವರ್ತನೆ ತೋರಿದ್ದು: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು : ಇಂದಿನ ವಿಧಾನ ಪರಿಷತ್ ನಲ್ಲಿನ ಗಲಾಟೆಯ ಬಗ್ಗೆ ವಿಷಾದಿಸುತ್ತೇನೆ. ಆದರೆ,  ಸಭಾಪತಿ ಇರುವಾಗ ಉಪಸಭಾಪತಿ ಕೂತಿದ್ಯಾಕೆ ..? ಈ ಗಲಾಟೆಯಲ್ಲಿ ಬಿಜೆಪಿ ಗುಂಡಾವರ್ತನೆ ತೋರಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದರು.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅವಿಶ್ವಾಸ ನಿರ್ಣದ ನೋಟಿಸ್ ಕ್ರಮಬದ್ಧವಾಗಿರಲಿಲ್ಲ. ನೋಟಿಸ್ ತಿರಸ್ಕರಿಸುವ ಅಧಿಕಾರ ಸ್ಪೀಕರ್ ಗೆ ಇದೆ. ಕ್ರಮಬದ್ಧವಾಗಿರದಂತೆ ನೋಟಿಸ್ ಅನ್ನು ಸ್ಪೀಕರ್ ತಿರಸ್ಕರಿಸಿದ್ದಾರೆ. ನಿಯಮಾವಳಿ ಪ್ರಕಾರ ಕಲಾಪ ನಡೆಯಬೇಕು. ಹೀಗಿದ್ದೂ ಇದ್ಯಾವುದನ್ನು ಇಂದಿನ ಕಲಾಪದಲ್ಲಿ ಪಾಲಿಸಿಲ್ಲ ಎಂದರು.

ಮೋಷನ್ ರಿಜೆಕ್ಟ್ ಆದ ಮೇಲೆ ಸಭಾಪತಿ ಕೂರುವ ಬದಲಾಗಿ, ಉಪ ಸಭಾಪತಿಯನ್ನು ಕೂರಿಸಿದ್ದು ಬಿಜೆಪಿ. ಇದು ಕಾನೂನು ಬಾಹಿರ ಅಪರಾಧವಾಗಿದೆ. ಸಭಾಪತಿ ಬರಬಾರದು ಎಂದು ಬಾಗಿಲು ಕೂಡ ಹಾಕಿದ್ದು ಬಿಜೆಪಿ. ಇದು  ಗುಂಡೂಗಿರಿ ಅಲ್ವಾ.? ಇಂದಿನ ಅಜೆಂಡಾದಲ್ಲಿ ಅವಿಶ್ವಾಸ ನಿರ್ಣಯವೇ ಇರಲಿಲ್ಲ. ಅಜೆಂಡಾದಲ್ಲಿ ಎಲ್ಲಾ ಕಲಾಪಗಳು ಮುಗಿದಿವೆ. ಹೀಗಿದ್ದೂ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದು ಬಿಜೆಪಿ. ಇದು ಬಿಜೆಪಿಯ ಗುಂಡಾಗಿರಿಯಾಗಿದೆ. ಕಾಂಗ್ರೆಸ್ ಗುಂಡಾವರ್ತನೆ ತೋರಿಲ್ಲ. ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿ ಗೂಂಡಾಗಿರಿಯನ್ನು ಸದನದಲ್ಲಿ ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *