Connect with us

Dvgsuddi Kannada | online news portal | Kannada news online

ಬೀದಿ ವ್ಯಾಪಾರಿಗಳಿಗೆ ಕಿರುಸಾಲಕ್ಕೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಬೀದಿ ವ್ಯಾಪಾರಿಗಳಿಗೆ ಕಿರುಸಾಲಕ್ಕೆ ಅರ್ಜಿ ಆಹ್ವಾನ

 ಡಿವಿಜಿ ಸುದ್ದಿ, ದಾವಣಗೆರೆ: ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯಡಿ ಕಿರು ಸಾಲ ಮತ್ತು ಬಡ್ಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೋವಿಡ್-19 ಲಾಕ್‍ಡೌನ್ ಅವಧಿಯು ಬೀದಿ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ಪ್ರತಿಕೂಲ ಪರಿಣಮ ಬೀರಿದ್ದು, ಬೀದಿ ವ್ಯಾಪಾರಿಗಳ ಜೀವನೋಪಾಯ ಅಭಿವೃದ್ದಿಗಾಗಿ  ಅವರ ವ್ಯವಹಾರವನ್ನು ಪುನಾರಾರಂಭಿಸಲು ಬಂಡವಾಳ ಒದಗಿಸುವ ತುರ್ತು ಅವಶ್ಯಕತೆ ಇರುವುದರಿಂದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ಬೀದಿ ವ್ಯಾಪಾರಸ್ಥರಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯನ್ನು ಅನುಷ್ಟಾನಗೊಳಿಸಿದೆ.

ಈ ಯೋಜನೆಯ ನಿಯಮದಂತೆ ಅರ್ಹ ಬೀದಿ ವ್ಯಾಪಾರಸ್ಥರು ರೂ.10,000/-ಗಳ ಸಾಲ ಮತ್ತು ಬಡ್ಡಿ ಸಹಾಯ ಧನ ಪಡೆಯಬಹುದಾಗಿದ್ದು, ಆಸಕ್ತ ಬೀದಿ ವ್ಯಾಪಾರಸ್ಥರು ಈ ಯೋಜನೆಯ ವೆಬ್ ಪೋರ್ಟಲ್ http://pmsvanidhi.mohua.gov.in ಮೂಲಕ ಈಗಾಗಲೇ ಖಾತೆ ಹೊಂದಿರುವ ಬ್ಯಾಂಕ್‍ಗಳನ್ನು ಆಯ್ಕೆ ಮಾಡಿಕೊಂಡು ಕೂಡಲೇ ಅರ್ಜಿ ಸಲ್ಲಿಸಬಹುದು.

ಬೀದಿಬದಿ ವ್ಯಾಪಾರಸ್ಥ ಕಾರ್ಡ್ ಹೊಂದದೇ ಇರುವವರು ಮಹಾನಗರಪಾಲಿಕೆಯಲ್ಲಿ ತೆರೆಯಲಾಗಿರುವ ಸಹಾಯ ಕೇಂದ್ರದ ಮೂಲಕ 24 ಗಂಟೆಯೊಳಗಾಗಿ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ಕೇವಲ 10 ದಿನಗಳ ಒಳಗಾಗಿ ಸಾಲ ಮತ್ತು ಸಹಾಯಧನ ದೊರಕಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top