ದಾವಣಗೆರೆ: ಮಹಾನಗರಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾನ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 27 ರಂದು ಮಧ್ಯಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ ‘ಎ’, ಉಪ ಮೇಯರ್ ಸ್ಥಾನವನ್ನು ಹಿಂದುಳಿದ ವರ್ಗ ‘ಬಿ’ ಗೆ ಮೀಸಲಾತಿ ನಿಗದಿ ಮಾಡಿ ರಾಜ್ಯ ಸರ್ಕಾರ ಸೆ.2ರಂದು ಅಧಿಸೂಚನೆ ಹೊರಡಿಸಿದೆ.. ಒಟ್ಟು 45 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ.



