ರಾಮ ಮಂದಿರ ಶಿಲಾನ್ಯಾಸ  ಕಾರ್ಯಕ್ರಮದಿಂದ ದೂರು ಉಳಿಯಲಿರುವ ಉಮಾ ಭಾರತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಅಯೋಧ್ಯೆ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರು ಕೊರೊನಾ ವೈರಸ್ ಕಾರಣದಿಂದಾಗಿ ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಡೆಯುವ ರಾಮಮಂದಿರ  ಶಿಲಾನ್ಯಾಸ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ.

ರಾಮ ಮಂದಿರ ಹೋರಾಟ ನಡೆಸಿದವ ಪ್ರಮುಖರಲ್ಲಿ ಒಬ್ಬರಾದ ಉಮಾ ಭಾರತಿ, ಅಯೋಧ್ಯೆಯಲ್ಲಿ ನಡೆಯುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದಿದ್ದಾರೆ.  ತಾನು ಸರಯು ನದಿಯ ದಡದಲ್ಲಿ ಇರುತ್ತೇನೆ. ಭೂಮಿ ಪೂಜೆ ಕಾರ್ಯಕ್ರಮ ಮುಗಿದ ಬಳಿಕ ರಾಮ್ ಲಲ್ಲಾಗೆ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ಕೆಲ ನಾಯಕರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುವುದನ್ನು ನಾನು ಕೇಳಿದ್ದೇನೆ. ಹೀಗಾಗಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳುವವರ ಬಗ್ಗೆ ನನಗೆ ಚಿಂತೆಯುಂಟಾಗಿದೆ. ಸಮಾರಂಭದ ದಿನದಂದು ಸರಯು ನದಿಯ ದಡದಲ್ಲಿ ಉಳಿಯುತ್ತೇನೆ ಎಂದು ನಾನು ದೇವಾಲಯದ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದಿದ್ದಾರೆ.

ನಾನು ಇಂದು ಭೋಪಾಲ್‌‌ನಿಂದ ಹೊರಡುತ್ತೇನೆ. ನಾಳೆ ಸಂಜೆ ಅಯೋಧ್ಯೆಯನ್ನು ತಲುಪುವವರೆಗೂ ಕೂಡ ನಾನು ಕೋವಿಡ್ ಸೋಂಕಿತರೊಂದಿಗೆ ಸಂಪರ್ಕ ಹೊಂದುವ ಸಾಧ್ಯತೆ ಹೆಚ್ಚಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಿ ಮತ್ತು ಇತರರು ಭಾಗವಹಿಸುವ ಕಾರ್ಯಕ್ರಮದಿಂದ ನಾನು ದೂರವಿರುವುದು ಉತ್ತಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರರು ಕಾರ್ಯಕ್ರಮ ಮುಗಿಸಿಕೊಂಡು ತೆರಳಿದ ಬಳಿಕ ನಾನು ಅಯೋಧ್ಯೆಗೆ ತೆರಳಿ ದರ್ಶನ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *