ಕಾಂಗ್ರೆಸ್ಸಿಗರು ಕೇಸ್ ದಾಖಲಿಸಿದರೆ, ನನ್ನ ಮನೋ ಸ್ಥೈರ್ಯ ಕುಗ್ಗುವುದಿಲ್ಲ: ರೇಣುಕಾಚಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ದಾವಣಗೆರೆ: ನನ್ನ ಮೇಲೆ ಕಾಂಗ್ರೆಸ್ಸಿಗರು ಪ್ರಕರಣ ದಾಖಲಿಸುವ ಮೂಲಕ ಮಾನಸಿಕ ಸ್ಥೈರ್ಯ  ಕುಗ್ಗಿಸಲು  ಸಾಧ್ಯವಿಲ್ಲ. ಇದು ನನಗೆ ಇನ್ನಷ್ಟು ಕೆಲಸ ಮಾಡಲು ಆಶೀರ್ವಾದವಾಗಲಿದೆ  ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಚಿಕಿತ್ಸೆಗೆ ಸ್ಪಂದಿಸದ ತಬ್ಲೀಘಿಗಳನ್ನು ಗುಂಡಿಕ್ಕಿ ಕೊಂದರೂ ತಪ್ಪಲ್ಲ ಎಂದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷಚಂದ್ರ  ಕೆಟಿಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ  ಅವರು, ನಾನು ಹೋರಾಟದ ಮೂಲಕವೇ ಶಾಸಕನಾಗಿದ್ದೇನೆ. ಕಾಂಗ್ರೆಸ್ ಸರ್ಕಾರ ಇದ್ದಾಗ 2003ರಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದಾಗ ನನ್ನನ್ನು ಬಂಧಿಸಿ 15 ದಿನಗಳ ಕಾಲ ಬೆಳಗಾವಿ ಜೈಲಿನಲ್ಲಿಟ್ಟಿದ್ದರು. ಹೀಗಾಗಿ ಕಾಂಗ್ರೆಸ್ಸಿಗರು ಕೇಸ್ ದಾಖಲಿಸಿದರೆ ನನ್ನ ಮನೋ ಸ್ಥೈರ್ಯ ಕುಗ್ಗುವುದಿಲ್ಲ ಎಂದರು.

ಚುನಾವಣೆಗೆ 15 ದಿನಗಳಿರುವಾಗ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ವಿ.ಎಚ್‌.ಪಿ ಕಾರ್ಯಕ್ರಮದಲ್ಲಿ ಮಾತನಾಡಿದ್ದಕ್ಕೆ ನನ್ನನ್ನು ಬಳ್ಳಾರಿ ಜೈಲಿಗೆ ಕಳುಹಿಸಿದ್ದರು. ಕಾಂಗ್ರೆಸ್‌ ನಾಯಕರಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಹೀಗಾಗಿ ಜೈಲಿಗೆ ಕಳುಹಿಸುವುದಾದರೆ ಕಳಿಸಲಿ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *