ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ಕೆಲಸ ನಿರ್ವಹಿಸುತ್ತಿದ್ಧಾರೆ. ಇದಕ್ಕಾಗಿ ಸರ್ಕಾರ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಸಂಕಷ್ಟದ ಸಮಯದಲ್ಲಿ ಪ್ರತಿಭಟನೆಗೆ ಮುಂದಾಗಬಾರದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದರು..
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇವರ ಉತ್ತಮ ಕಾರ್ಯವನ್ನು ಮೆಚ್ಚಿದ ಸರ್ಕಾರ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಿದೆ. ಕೊರೊನಾ ಸಂಕಷ್ಟದ ಸಮುದಲ್ಲಿ ಪ್ರತಿಭಟನೆಗೆ ಇಳಿಯುವುದು ಸರಿಯಲ್ಲ ಎಂದರು.
ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ ತಿಳಿಯಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಕೇಂದ್ರ ತಂಡಕ್ಕೆ ಸಿಎಂ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಿದರು. ರಾಜ್ಯ ಸರ್ಕಾರ ತಗೆದುಕೊಂಡ ಕ್ರಮಕ್ಕೆ ಕೇಂದ್ರ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಹೆಚ್ಚಿನ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಸಭೆಯ ಬಳಿಕೆ ಬೆಂಗೂರಿನ ಕಂಟೈನ್ಮೆಂಟ್ ಜೋನ್ ಗಳಿಗೆ ಭೇಟಿ ನೀಡಿ ಪರಿಸೀಲನೆ ನಡೆಸಿ ನಂತರ ಮತ್ತೆ ಸಭೆ ಸೇರುವುದಾಗಿ ಹೇಳಿದ್ದಾರೆ ಎಂದರು.
ರಾಜ್ಯದಲ್ಲಿ ಕೊರೊನಾ ವೈರಸ್ ಮೂರನೇ ಹಂತಕ್ಕೆ ಹೋಗಿಲ್ಲ. ಇನ್ನು ಕೂಡ ೆರಡನೇ ಹಂತದಲ್ಲಿಯೇ ಇದೆ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಹೆಚ್ಚು ಹೆಚ್ಚು ತಪಾಸಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.



