ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಮೋಟರ್ ವಾಹನ ಕಾಯ್ದೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ವಿವಿಧ ಸಂಘಟನೆ, ರಾಜಕೀಯ ಪಕ್ಷದ ಮುಖಂಡರು, ಪ್ರಗತಿಪರ ಚಿಂತಕರು, ಸಾರ್ವಜನಿಕರು , ಪೊಲೀಸ್ ಮತ್ತು ಸಾರಿಗೆ ಇಲಾಖೆ ( ಆರ್ ಟಿಒ) ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದೆ.
ಸೋಮವಾರ ಬೆಳಗ್ಗೆ 11ಗಂಟೆಗೆ ವನಿತಾ ಸಮಾಜದ ಸಭಗಣದಲ್ಲಿ ಸಭೆ ನಡೆಯಲಿದ್ದು, ಎಲ್ಲರಿಗೂ ಮುಕ್ತ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನೂತನ ಕಾಯ್ದೆಯ ಸಾಧಕ- ಭಾದಕದ ಬಗ್ಗೆ ಚರ್ಚೆ ನಡೆಸಬಹುದು.
ಸೆ.1 ರಿಂದ ಮೋಟರ್ ವಾಹನ ಕಾಯ್ದೆ ಜಾರಿಗೆ ಬಂದಿದ್ದು, ನಿಯಮ ಉಲ್ಲಂಘನೆಯ ದಂಡದ ಪ್ರಮಾಣವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಕಾಯ್ದೆಯಿಂದ ಸಾರ್ವಜನಿಕರ ಮೇಲೆ ಭಾರೀ ಹೊರೆ ಬಿದ್ದಂತಾಗಿದೆ. ಈ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ.
ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ದಿನೇಶ್ ಶೆಟ್ಟಿ, ಜಿಲ್ಲಾ ವರದಿಗಾರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್ , ಕಮ್ಯೂನಿಸ್ಟ್ ಪಕ್ಷದ ಮುಖಂಡ ಎಚ್.ಕೆ. ರಾಮಚಂದ್ರಪ್ಪ, ವಕೀಲ ಮುಸ್ತಾಕ್ ಅಹ್ಮದ್ ಮೌಲಿ, ಲಾರಿ ಮಾಲೀಲ ಸಂಘದ ಸೈಯದ್ ಸೈಫುಲ್ಲಾ, ಲಯನ್ಸ್ ಕ್ಲಬ್ ನ ಮಂಜುನಾಥ್ ಸ್ವಾಮಿ, ರೋಟರಿ ಸಂಸ್ಥೆ ವಿಶ್ವಜಿತ್ ಜಾದವ್ , ಲೆಕ್ಕ ಪರಿಶೋಧಕ ಉಮೇಶ್ ಶೆಟ್ಟಿ, ಬಸ್ ಮಾಲೀಕ ಸಂಘದ ಉಮೇಶ್, ಕನ್ನಡ ಪರ ಹೋರಾಟಗಾರರದ ಯಲ್ಲಪ್ಪ, ರಾಮೇಗೌಡ, ವೀರಶೈವ ಮಹಾಸಭಾ ಅಧ್ಯಕ್ಷ ದೇವರಮನೆ ಶಿವಕುಮಾರ್, ತ್ರಿಚಕ್ರ ವಾಹನ ಸಂಘದ ಅಧ್ಯಕ್ಷ ಪಳಿನಿ ಸ್ವಾಮಿ, ವಿದ್ಯಾರ್ಥಿ ಮುಖಂಡ ಮುಜಾಹಿದ್ ಭಾಗಿಯಾಗಲಿದ್ದಾರೆ.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 9844460336, 7483892205,



