ಸರ್ಜಾ ಫ್ಯಾಮಿಲಿಗೆ ಜ್ಯೂನಿಯರ್ ‘ಚಿರು’ ಎಂಟ್ರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ಬೆಂಗಳೂರು: ಚಿರಂಜೀವಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಸರ್ಜಾ ಪತ್ನಿ ಮೇಘನಾ ರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿಸಿದ್ದಾರೆ. ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ ನೀಡಿರುವುದು ಇನ್ನೂ ವಿಶೇಷವಾಗಿದೆ.

ಮೇಘನಾ ರಾಜ್‌ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದು ಧ್ರುವ ಸರ್ಜಾ ಜೂನಿಯರ್‌ ಚಿರಂಜೀವಿಯನ್ನು ಎತ್ತಿ ಮುದ್ದಾಡಿದ್ದಾರೆ.ಬೆಳಗ್ಗೆ 11 ಗಂಟೆ 7 ನಿಮಿಷಕ್ಕೆ ಮೇಘನಾ ರಾಜ್‌ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ಮಗು ಜನಿಸಿದ ವಿಚಾರ  ತಿಳಿದು ಕೂಡಲೇ ಧ್ರುವ ಸರ್ಜಾ ಖಾಸಗಿ ಆಸ್ಪತ್ರೆಗೆ ಆಗಮಿಸಿ  ಮಗುವನ್ನು ಎತ್ತಿ ಸಂಭ್ರಮಿಸಿದ್ದಾರೆ.

sarja family 3

ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಜೂನಿಯರ್ ಚಿರು ಆಗಮಿಸಿದಂತಾಗಿದೆ. ಜೂನಿಯರ್ ಚಿರು ಕುರಿತು ಅಕ್ಟೋಬರ್ 16ರಂದು ಧ್ರುವ ಸರ್ಜಾ ವಿಡಿಯೋ ಮಾಡುವ ವೆಲ್ ಕಮ್ ಹೇಳಿದ್ದರು.

ಚಿರಂಜೀವಿ ಸರ್ಜಾ ಜೂನ್ 7 ರಂದು ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಅವರು ಸಾವನ್ನಪ್ಪಿದ ದಿನವೇ ಮೇಘನಾ ರಾಜ್ ಸರ್ಜಾ ಗರ್ಭಿಣಿಯಾಗಿರುವ ಕುರಿತ ಸುದ್ದಿ ಹೊರ ಬಿದ್ದಿತ್ತು. ಅದಾದ ಬಳಿಕ ಅವರು ಮನೆಯಲ್ಲೇ ಕಾಲ ಕಳೆಯುವ ಮೂಲಕ ಕಾಳಜಿ ವಹಿಸಿದ್ದರು. ಈ ವೇಳೆ ಸ್ಯಾಂಡಲ್‍ವುಡ್‍ನ ಹಲವು ನಟ, ನಟಿಯರು ಗಣ್ಯರು ಹಾಗೂ ಸ್ನೇಹಿತರು ಮೇಘನಾ ಅವರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದೀಗ ಮೇಘನಾ ಅವರಿಗೆ ಮಗು ಹುಟ್ಟಿರುವುದರಿಂದ ಸ್ಯಾಂಡಲ್‍ವುಡ್‍ನಲ್ಲಿ ಸಂತಸ ಮನೆ ಮಾಡಿದೆ.

sarja family 2

ಅಕ್ಟೋಬರ್ 4ರಂದು ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಮನೆಯಲ್ಲಿಯೇ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿದೆ. ಕುಟುಂಬದವರು ಮತ್ತು ಕೆಲ ಆಪ್ತರು ಮಾತ್ರ ಸೀಮಂತ ಶಾಸ್ತ್ರಕ್ಕೆ ಆಗಮಿಸಿದ್ದರು. ಜೊತೆಗೆ ಚಿರು ಇಲ್ಲ ಎಂಬ ನೋವು ಮೇಘನಾಗೆ ಕಾಡದಿರಲಿ ಎಂದು ಚಿರು ಅವರ ದೊಡ್ಡ ಫೋಟೋವನ್ನು ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿದ್ದು ವಿಶೇಷವಾಗಿತ್ತು.

ಸುಂದರ್ ರಾಜ್, ಪ್ರಮೀಳಾ , ಪನ್ನಗಾಭರಣ ಹಾಗೂ ಮೇಘನಾ ಸ್ನೇಹಿತರು ಖಾಸಗಿ ಆಸ್ಪತ್ರೆಯ ಬಳಿಯೇ ಇದ್ದು ಮೇಘನಾ ಆರೈಕೆ ಮಾಡುತ್ತಿದ್ದಾರೆ. ಗಂಡು ಮಗು ಜನನವಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಬೆಳ್ಳಿ ತೊಟ್ಟಿಲು ಖರೀದಿ: ಮನೆಗೆ ಮುದ್ದಾದ ಮಗು ಬರುವ ಮುನ್ನವೇ ಧ್ರುವ ಸರ್ಜಾ ಅವರು ಬೆಳ್ಳಿ ತೊಟ್ಟಿಲು ಖರೀದಿಸಿದ್ದರು. ನವರತ್ನ ಜ್ಯೂವೆಲರ್ಸ್ ನಲ್ಲಿ ಸುಮಾರು 10 ಲಕ್ಷ ರೂ.ನೀಡಿ ಬೆಳ್ಳಿಯ ತೊಟ್ಟಿಲು ಜೊತೆಗೆ ಚಿನ್ನದ ಬಟ್ಟಲನ್ನು ಖರೀದಿ ಮಾಡಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *