ಹಿಂದೂ ದೇವಾಲಯ ರಕ್ಷಣೆಗೆ ಆಡಳಿತಾಧಿಕಾರಿ ನೇಮಕ: ಪೂಜಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹಾವೇರಿ: ಹಿಂದೂ ದೇವಾಲಯಗಳ ರಕ್ಷಣೆ ಹಾಗೂ ವ್ಯವಸ್ಥಿತ ನಿರ್ವಹಣೆಗೆ ಎಲ್ಲಾ  ದೇವಾಲಯಗಳಿಗೂ ಆಡಳಿತಾಧಿಕಾರಿ ನೇಮಕ ಮಾಡಲಾಗುವುದು ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ 34 ಸಾವಿರ ದೇವಾಲಯಗಳಿದ್ದು, 100 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಒಂದು ಸಾವಿರ ಎ, ಬಿ ದರ್ಜೆಯ ದೇವಾಲಯಗಳಿದ್ದು,  ಉಳಿದಂತೆ 33 ಸಾವಿರ ಸಿ ದರ್ಜೆಯ ದೇವಾಲಯಗಳಿವೆ ಎಂದರು.

ಎ ದರ್ಜೆಯ ದೇವಾಲಯಗಳಿಗೆ ಉಪ ವಿಭಾಗಧಿಕಾರಿ, ಬಿ ದರ್ಜೆಗೆ ಕಂದಾಯ ನಿರೀಕ್ಷಕ,  ಸಿ ದರ್ಜೆಗೆ   ಗ್ರಾಮ ಲೆಕ್ಕಾಧಿಕಾರಿಗಳನ್ನು  ಆಡಳಿತಾಧಿಕಾರಿಗಳನ್ನಾಗಿ ಒಂದು ತಿಂಗಳಲ್ಲಿ ನೇಮಿಸಲಾಗುವುದು.  ಎ ದರ್ಜೆಯ ದೇವಾಲಯಗಳಲ್ಲಿ ಗೋ ರಕ್ಷಣಾ ಕೇಂದ್ರ ತೆರೆಯಲಾಗುವುದು ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *