ಸರ್ಕಾರದ ಯೋಜನೆ ಲಾಭ ಪಡೆಯಲು ಬೆಳೆಯ ವಿವರ ನಮೂದಿಸುವುದು ಅತ್ಯಗತ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆ (Farmers Crop Survey) ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಆ್ಯಪ್ ಮೂಲಕ ರೈತರೇ ತಾವು ಬೆಳೆದ ಬೆಳೆ ನಮೂದಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ನಿಯೋಜಿತ ಖಾಸಗಿ ನಿವಾಸಿಗಳಿಂದ, ಇಲಾಖಾ ಸಿಬ್ಬಂದಿಗಳಿoದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲಾಗಿತ್ತು. ಆದರೆ 2020-21ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಬೆಳೆ ಸಮೀಕ್ಷೆ ಯೋಜನೆಗೆ ಬಹು ದೊಡ್ಡ ಬದಲಾವಣೆಯನ್ನು ತಂದು ಸ್ವತ: ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್‌ವಾರು ಬೆಳೆದ ವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನು ಛಾಯಾ ಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ.

ಬೆಳೆ ಸಮೀಕ್ಷೆ ಆ್ಯಪ್‌ನ್ನು ಗೂಗಲ್ ಪ್ಲೇಸ್ಟೋರ್‌ನಲ್ಲಿ (Farmers Crop Survey App 2020-21) ಲಭ್ಯವಿದೆ. ರೈತರ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಆರ್‌ಟಿಸಿಯಲ್ಲಿ ಬೆಳೆ ವಿವರಗಳ ದಾಖಲಾತಿಗಾಗಿ ಎನ್‌ಡಿಆರ್‌ಎಫ್, ಎಸ್‌ಬಿಆರ್‌ಎಫ್ ಅಡಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಹಾನಿಗೊಳಗಾದ ಬೆಳೆಯ ವಿಸ್ತೀರ್ಣದ ವಿವರ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ. ಬೆಳೆ ಸಮೀಕ್ಷೆಯ ಮಾಹಿತಿಯು ಅತ್ಯಗತ್ಯವಾಗಿದ್ದು, ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ನಮೂದಿಸಲು ಕೋರಲಾಗಿದೆ.

ಆಯಾ ಗ್ರಾಮದಲ್ಲಿರುವ ವಿದ್ಯಾವಂತ ಯುವಕರನ್ನು ಸಹಾಯದಿಂದಲೂ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದಾಗಿದೆ. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ರೈತರೇ ಖುದ್ದು ಖಾಸಗಿ ನಿವಾಸಿಗಳ ಸಹಾಯ ಪಡೆದು ಆಗಸ್ಟ್ 24ನೇ ತಾರೀಖಿನವರೆಗೆ ನಮೂದಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *