Connect with us

Dvgsuddi Kannada | online news portal | Kannada news online

ರೈತರಿಗೆ ರಸಗೊಬ್ಬರ ಕೊರತೆ ಆಗದಂತೆ ಕ್ರಮಕ್ಕೆ ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ

ಪ್ರಮುಖ ಸುದ್ದಿ

ರೈತರಿಗೆ ರಸಗೊಬ್ಬರ ಕೊರತೆ ಆಗದಂತೆ ಕ್ರಮಕ್ಕೆ ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ

ಹೊಸ ದಿಲ್ಲಿ: ಈ ಬಾರಿ ಬಿತ್ತನೆ ಹೆಚ್ಚಾಗಿದ್ದು, ಕೃಷಿಗೆ ಅಗತ್ಯವಾದ ರಸಗೊಬ್ಬರ ಹೆಚ್ಚಿನದಾಗಿ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರ, ಯೂರಿಯಾ ಕೊರತೆ ಆಗದಂತೆ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಬಿ.ಸಿ ಪಾಟೀಲ್, ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಭೇಟಿ  ಮಾಡಿ ಮನವಿ ಸಲ್ಲಿಸಿದರು.

  ದೆಹಲಿಗೆ ಭೇಟಿಯಾಗಿ ಬಿ.ಸಿ. ಪಾಟೀಲ್, ರಾಜ್ಯದ ಕೃಷಿ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ ಸಚಿವರಿಗೆ ವಿವರಿಸಿದರು. ಈ ಬಾರಿ ಉತ್ತಮ ಮಳೆಯಾಗಿದ್ದು, ಕೋವಿಡ್‌ನಿಂದಾಗಿ ಗ್ರಾಮೀಣ ಭಾಗದಲ್ಲಿ ರೈತಾಪಿ ವರ್ಗದ ಜೊತೆಗೆ ಯುವಜನತೆ ಕೃಷಿಗೆ ಹೆಚ್ಚು ಒತ್ತು ನೀಡಿದ್ದಾರೆ. ಹೀಗಾಗಿ ರಸಗೊಬ್ಬರ ಕೊರತೆ ಆಗದಂತೆ ಮನವಿ ಸಲ್ಲಿಸಿದರು. ನಕಲಿ ಬೀಜ ತಡೆ, ನಕಲಿ ರಾಸಾಯನಿಕ ಗೊಬ್ಬರ ಜಾಲವನ್ನು ಬೇಧಿಸುವಲ್ಲಿ ಕೃಷಿ‌ಇಲಾಖೆ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.

ನಕಲಿಬೀಜ, ರಾಸಾಯನಿಕ ಗೊಬ್ಬರ ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಅವರ ಪರವಾನಿಗೆ ರದ್ದುಗೊಳಿಸುವ ಬಗ್ಗೆಯೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರಸಚಿವರ ಜೊತೆ ಮಾಹಿತಿ ಹಂಚಿಕೊಂಡರು. ಕೃಷಿ ಸಚಿವರ ಈ ದಿಟ್ಟ ಕ್ರಮ ಹಾಗೂ ರೈತರ ಬಗೆಗಿನ ಕಾಳಜಿಗೆ ಸದಾನಂದಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೇಂದ್ರಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರವನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲೂ ಸಹ ರಸಗೊಬ್ಬರದ ಕೊರತೆಯಾಗುವುದಿಲ್ಲವೆಂದು‌ ಡಿ.ವಿ.ಸದಾನಂದಗೌಡ ಬಿ.ಸಿ.ಪಾಟೀಲರಿಗೆ ಭರವಸೆ ನೀಡಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top