Connect with us

Dvgsuddi Kannada | online news portal | Kannada news online

ತಾಲ್ಲೂಕು ಕೇಂದ್ರಗಳಲ್ಲಿ ರೈತರ ಉತ್ಪನ್ನ ದಾಸ್ತಾನಿಗೆ ಶೀತಲೀಕರಣ ಘಟಕ: ಬಿ.ಸಿ. ಪಾಟೀಲ್

ಪ್ರಮುಖ ಸುದ್ದಿ

ತಾಲ್ಲೂಕು ಕೇಂದ್ರಗಳಲ್ಲಿ ರೈತರ ಉತ್ಪನ್ನ ದಾಸ್ತಾನಿಗೆ ಶೀತಲೀಕರಣ ಘಟಕ: ಬಿ.ಸಿ. ಪಾಟೀಲ್

 ಡಿವಿಜಿ ಸುದ್ದಿ, ತುಮಕೂರು: ರೈತರ ಉತ್ಪನ್ನ ದಾಸ್ತಾನಿಗೆ ಶೀತಲೀಕರಣ ಘಟಕ ಅವಶ್ಯವಾಗಿದ್ದು, ತಾಲ್ಲೂಕು ಕೇಂದ್ರಗಳಲ್ಲೂ ಶೀತಲೀಕರಣ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಸಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ‌

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ 20 ಜಿಲ್ಲೆಗಳಲ್ಲಿ  ಪ್ರವಾಸ ಮಾಡಿದ್ದೇನೆ. ಎಲ್ಲ ಕಡೆಯೂ ರೈತರು ತಮ್ಮ ಉತ್ಪನ್ನಗಳನ್ನು ಶೇಖರಿಸಲು ಶೀತಲೀಕರಣ ಘಟಕಗಳು ಅವಶ್ಯ ಎಂದು ಮಾಹಿತಿ ನೀಡಿದ್ದಾರೆ. ಈ ವಿಚಾರವಾಗಿ ಆದ್ಯತೆಯೊಂದಿಗೆ ಕೆಲಸ ಮಾಡಲಾಗುವುದು ಎಂದರು.

ಕಳಪೆ , ಅವಧಿಪೂರ್ಣಗೊಂಡ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಈ ಬಗ್ಗೆ ನಿಗಾ ಇಡಲು ರಾಜ್ಯಮಟ್ಟದಲ್ಲಿ ಮೂರು ತಂಡ ರಚಿಸಲಾಗಿದೆ. ಇಲಾಖೆ ಜಿಲ್ಲಾ ಉಪನಿರ್ದೇಶಕರು ಹಾಗೂ ಅಧಿಕಾರಿಗಳನ್ನು ಒಳಗೊಂಡ ವಿಚಕ್ಷಣಾದಳ ರಚಿಸಲಾಗಿದೆ ಎಂದರು.

ಕಳಪೆ ಬಿತ್ತನೆ ಬೀಜ ಮಾರಾಟ ಮಾಡುತ್ತಿದ್ದ ರಾಣೆಬೆನ್ನೂರಿನ ವೆಂಕಟೇಶ್ವರ ಆಗ್ರೊ ಕೇಂದ್ರಕ್ಕೆ ಬೀಗ ಮುದ್ರೆ ಹಾಕಲಾಗಿದೆ. ಹೂವಿನಹಡಗಲಿ ತಾಲ್ಲೂಕಿನ ಲಿಂಗನಹಳ್ಳಿಯ 5.8 ಲಕ್ಷ ಕಳಪೆ ಮುಸುಕಿನ ಜೋಳ ಮಾರಾಟ ಮಾಡುತ್ತಿದ್ದ ಕೇಂದ್ರ, ರಟ್ಟಿಹಳ್ಳಿ ತಾಲ್ಲೂಕು ಕೇಂದ್ರದ ಸೃಷ್ಟಿ ಆಗ್ರೊ ಕೇಂದ್ರ, ಮಾಸೂರಿನ ಕೃಷಿ ಆಗ್ರೊ ಕೇಂದ್ರ ಹೀಗೆ ಹಲವು ರಸಗೊಬ್ಬರ ಬಿತ್ತನೆ ಬೀಜ ಮಾರಾಟ ಅಂಗಡಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಗುಡಿಬಂಡೆ, ಬಾಗೇಪಲ್ಲಿ ಚಿಂತಾಮಣಿಯಲ್ಲಿ ವಿಚಕ್ಷಣ ದಳದ ಅಧಿಕಾರಿಗಳು ದಾಳಿ ನಡೆಸಿ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ ಎಂದು ವಿವರಿಸಿದರು.

ಪೂರ್ವ ಮುಂಗಾರು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು‌. ಈ ಹಿನ್ನೆಲೆಯಲ್ಲಿ ಅಗತ್ಯ ಗೊಬ್ಬರ ಮತ್ತು ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ಜಿಲ್ಲೆಯಲ್ಲಿಯೂ ಕೊರತೆ ಇಲ್ಲ. ಕೇಂದ್ರ ಸರ್ಕಾರವು ಕೃಷಿ ಇಲಾಖೆಗೆ ನೀಡುವ ಅನುದಾನ ಕಡಿತಗೊಳಿಸಿಲ್ಲ ಎಂದು ಹೇಳಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top