ಅಮರಾವತಿ: ಆಂಧ್ರ ಪ್ರದೇಶ ರಾಜ್ಯವು ಆಡಳಿತ ವಿಕೇಂದ್ರೀಕರಣ ಉದ್ದೇಶದಿಂದ ಮೂರು ರಾಜಧಾನಿ ಮಾಡುವ ಆಂಧ್ರ ಪ್ರದೇಶ ವಿಕೇಂದ್ರಿಕರಣ ಮತ್ತು ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆ–2020ಕ್ಕೆ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದ್ದು, ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಮಂಡನೆಯಾಗಿದೆ.
ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಹಾಗೂ ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಲು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯವನ್ನು ವಿವಿಧ ವಲಯಗಳನ್ನಾಗಿ ವಿಭಾಗಿಸಿ ಅಭಿವೃದ್ಧಿಪಡಿಸುವುದು ಮುಖ್ಯ ಉದ್ದೇಶವಾಗಿದೆ.
ಅಧಿವೇಶನಕ್ಕೂ ಮುನ್ನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ಮಸೂದೆ ಅಂಗೀಕಾರಗೊಂಡಿತು. ತಜ್ಞರ ಸಮಿತಿಯ ಶಿಫಾರಸುಗಳಿಗೂ ಸಂಪುಟ ಸಮ್ಮತಿ ನೀಡಿದೆ.



