ರಾಮನಗರ ರಕ್ಷಿಸಿ, ಇಲ್ಲದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ: ಶಾಸಕಿ ಅನಿತಾ ಕುಮಾರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದ, ಬೆಂಗಳೂರುಪಾದರಾಯನಪುರ ಗಲಭೆಯಲ್ಲಿ ಬಂಧಿಸಿದ ಕೊರೊನಾ ಶಂಕಿತರನ್ನು  ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ. ಈ ಕೂಡಲೇ  ಎಲ್ಲ ಎಲ್ಲರನ್ನು ಬೇರೆಡೆ ಸ್ಥಳಾಂತರ ಮಾಡಿ. ಇಲ್ಲದಿದ್ದರೆ, ಬೀದಿಗೆ ಇಳಿದು ಹೋರಾಟ ಮಾಬೇಕಾಗುತ್ತದೆ  ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು  ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಆದರೆ,  ರಾಜ್ಯಸರ್ಕಾರ ಕರೋನ ಸೋಂಕನ್ನು ಜಿಲ್ಲೆಗೆ ಕರೆ ತಂದಿದ್ದು ಸರೀನಾ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಆರೋಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿಸಲಿ. ಕೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ  ಎಚ್ಚರಿಸಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *