ಡಿವಿಜಿ ಸುದ್ದಿ, ಬೆಂಗಳೂರು: ನಿನ್ನೆಯಷ್ಟೇ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ ಪಾಕಿಸ್ತಾನ ಜಿಂದಬಾದ್ ಅಂತ ಘೋಷಣೆ ಕೂಗಿ ಪರಪ್ಪನ ಅಗ್ರಹಾರ ಸೇರಿಕೊಂಡಿದ್ದಾಳೆ. ಈ ಹೇಳಿಕೆ ಖಂಡಿಸಿ ಹಿಂದೂ ಸಂಘಟನೆ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮತ್ತೊಬ್ಬ ಯುವತಿ ಅರುದ್ರಾ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಳೆ.
ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಅಮೂಲ್ಯ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಪ್ರತಿಭಟನಾ ಸ್ಥಳಕ್ಕೆ ಮುಕ್ತಿ ಮುಸ್ಲಿಂ, ಮುಕ್ತಿ ಕಾಶ್ಮೀರ್, ಮುಕ್ತಿ ದಲಿತ್ ಭಿತ್ತಿಪತ್ರ ಹಿಡಿದು ಬಂದ ಅರುದ್ರಾ ಪಾಕಿಸ್ತಾನ ಪರ ಘೋಷಣೆ ಕೂಗಲಾರಂಭಿಸಿದ್ದಾಳೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಅರುದ್ರಾಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರುದ್ರಾ ವಿರುದ್ಧ ಹಿಂದೂ ಪರ ಸಂಘಟನೆಗಳು ದೂರು ದಾಖಲಿಸಿವೆ. ಮುನ್ನೇಚ್ಚರಿಕೆ ಕ್ರಮವಾಗಿ ಆರುದ್ರಾಳನ್ನು ಪೊಲೀಸರು ಬಿಗಿ ಬಂದೋಬಸ್ತ್ ನಲ್ಲಿ ಇರಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ನಾರಾಯಣ ಎಂಬವರ ಪುತ್ರಿಯಾಗಿರುವ ಆರುದ್ರಾ ಆರ್ಕಿಟೆಕ್ ಎಂಬ ಮಾಹಿತಿ ಲಭ್ಯವಾಗಿದೆ.



