Connect with us

Dvgsuddi Kannada | online news portal | Kannada news online

ರೈತರಿಗೆ 2 ಸಾವಿರ ನೀಡಲು ಸಾವಿರ ಕೋಟಿ ಅನುದಾನ ಬಿಡುಗಡೆ: ಯಡಿಯೂರಪ್ಪ

ಪ್ರಮುಖ ಸುದ್ದಿ

ರೈತರಿಗೆ 2 ಸಾವಿರ ನೀಡಲು ಸಾವಿರ ಕೋಟಿ ಅನುದಾನ ಬಿಡುಗಡೆ: ಯಡಿಯೂರಪ್ಪ

 ಡಿವಿಜಿ ಸುದ್ದಿ, ಬೆಂಗಳೂರುಪ್ರತಿ ರೈತರ ಖಾತೆಗಳಿಗೆ ತಲಾ 2,000 ಪಾವತಿಸಲು ಸೋಮವಾರ 1,000 ಕೋಟಿ ಅನುದಾನ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ 19 ನಿಯಂತ್ರಣ ಉದ್ದೇಶದಿಂದ ಹಮ್ಮಿಕೊಂಡಿದ್ದ ಧನ್ವಂತರಿ ಯಾಗದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಿದ್ದರು. ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸುಮಾರು 50 ಲಕ್ಷ ರೈತರಿಗೆ ಇದರ ಪ್ರಯೋಜನ ಸಿಗುತ್ತದೆ. ರಾಜ್ಯದ ಹಣಕಾಸು ಸ್ಥಿತಿ ಅಷ್ಟಾಗಿ ಉತ್ತಮವಿಲ್ಲದೇ ಇದ್ದರೂ ರೈತರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದರು.

ಕೇಂದ್ರ ಸರ್ಕಾರ ಪ್ರತಿಯೊಬ್ಬ  ರೈತನಿಗೆ ಎರಡು ಕಂತುಗಳಲ್ಲಿ ತಲಾ 3,000 ರಂತೆ ಒಟ್ಟು 6,000 ಮತ್ತು ರಾಜ್ಯ ಸರ್ಕಾರ 2,000 ರಂತೆ ಎರಡು ಕಂತುಗಳಲ್ಲಿ 4,000 ಪಾವತಿಸಲಿದೆ.  ಪ್ರತಿಯೊಬ್ಬ ರೈತರಿಗೆ 10,000 ಸಿಗುತ್ತದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top