Connect with us

Dvgsuddi Kannada | online news portal | Kannada news online

ರೈತರಿಗೆ 2 ಸಾವಿರ ನೀಡಲು ಸಾವಿರ ಕೋಟಿ ಅನುದಾನ ಬಿಡುಗಡೆ: ಯಡಿಯೂರಪ್ಪ

ಪ್ರಮುಖ ಸುದ್ದಿ

ರೈತರಿಗೆ 2 ಸಾವಿರ ನೀಡಲು ಸಾವಿರ ಕೋಟಿ ಅನುದಾನ ಬಿಡುಗಡೆ: ಯಡಿಯೂರಪ್ಪ

 ಡಿವಿಜಿ ಸುದ್ದಿ, ಬೆಂಗಳೂರುಪ್ರತಿ ರೈತರ ಖಾತೆಗಳಿಗೆ ತಲಾ 2,000 ಪಾವತಿಸಲು ಸೋಮವಾರ 1,000 ಕೋಟಿ ಅನುದಾನ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ 19 ನಿಯಂತ್ರಣ ಉದ್ದೇಶದಿಂದ ಹಮ್ಮಿಕೊಂಡಿದ್ದ ಧನ್ವಂತರಿ ಯಾಗದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಿದ್ದರು. ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸುಮಾರು 50 ಲಕ್ಷ ರೈತರಿಗೆ ಇದರ ಪ್ರಯೋಜನ ಸಿಗುತ್ತದೆ. ರಾಜ್ಯದ ಹಣಕಾಸು ಸ್ಥಿತಿ ಅಷ್ಟಾಗಿ ಉತ್ತಮವಿಲ್ಲದೇ ಇದ್ದರೂ ರೈತರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದರು.

ಕೇಂದ್ರ ಸರ್ಕಾರ ಪ್ರತಿಯೊಬ್ಬ  ರೈತನಿಗೆ ಎರಡು ಕಂತುಗಳಲ್ಲಿ ತಲಾ 3,000 ರಂತೆ ಒಟ್ಟು 6,000 ಮತ್ತು ರಾಜ್ಯ ಸರ್ಕಾರ 2,000 ರಂತೆ ಎರಡು ಕಂತುಗಳಲ್ಲಿ 4,000 ಪಾವತಿಸಲಿದೆ.  ಪ್ರತಿಯೊಬ್ಬ ರೈತರಿಗೆ 10,000 ಸಿಗುತ್ತದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top