ಡಿವಿಜಿ ಸುದ್ದಿ, ಬೆಂಗಳೂರು: ಅಯೋಧ್ಯೆಯಲ್ಲಿ ಆಗಸ್ಟ್ 05 ರಂದು ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದ್ದು, ಸಕಲ ಸಿದ್ಧತೆ ಆರಂಭಗೊಂಡಿದೆ. ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ಅದೇ ರೀತಿ ರಾಜ್ಯದಿಂದ ಎಂಟು ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಕರ್ನಾಟಕಕ್ಕೆ ಎಂಟು ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. ಈ ಶುಭ ಸಂದರ್ಭಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ. ಕೊರೊನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ.
ರಾಜ್ಯದ ವಿಶೇಷ ಆಹ್ವಾನಿತರು:
1. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
2. ಇಸ್ಕಾನ್ ನ ಮಧುಪಂಡಿತ ದಾಸ್
3. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ
4. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
5. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
6. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
7. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು
8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ
ರಾಮನ ಮಂದಿರಕ್ಕಾಗಿ ಅಯೋಧ್ಯೆ ಭರ್ಜರಿಯಾಗಿ ಅಲಂಕೃತಗೊಂಡಿದೆ. ಭಾರೀ ಭದ್ರತೆಯನ್ನು ಸಹ ಕೈಗೊಳ್ಳಲಾಗಿದೆ. ಕೊರೊನಾ ಹಿನ್ನೆಲೆ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ.



